BREAKING NEWS

ದೆಹಲಿ ಶಾಲೆಗಳ ಆಧುನೀಕರಣಕ್ಕೆ ಸಿಸೋಡಿಯಾ ಕಾರಣ: ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶಾಲೆಗಳ ಆಧುನೀಕರಣಕ್ಕೆ ಮನೀಶ್ ಸಿಸೋಡಿಯಾ ಕಾರಣ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.

ಪ್ರತಿ ದಿನ ಮುಂಜಾನೆ ಆರು ಗಂಟೆಗೆ ಎದ್ದು ತಪಾಸಣೆಗೆ ತೆರಳುವ ಸಿಸೋಡಿಯಾ ಅವರಿಂದಲೇ ಕಳೆದ ಎಂಟು ವರ್ಷಗಳಲ್ಲಿ ದೆಹಲಿ ಸರ್ಕಾರಿ ಶಾಲೆಗಳು ಬದಲಾವಣೆಯಾಗಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.

ಪೂರ್ವ ವಿನೋದ್ ನಗರದಲ್ಲಿ ರಾಜ್‌ಕೀಯ ಸರ್ವೋದಯ ಕನ್ಯಾ ಬಾಲ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿದ ಅವರು, ಶಾಲೆ ಸಂಪೂರ್ಣ ನಿರ್ಮಾಣವಾದ ಬಳಿಕ ಕೊಲಂಬಿಯಾ ವಿಶ್ವವಿದ್ಯಾಲಯದಂತೆ ಕಾಣಲಿದೆ ಎಂದು ಹೇಳಿದರು.

ಭ್ರಷ್ಟಾಚಾರದ ಆರೋಪದಲ್ಲಿ ಕೇಂದ್ರವು ಸಿಸೋಡಿಯಾ ಅವರನ್ನು ಜೈಲಿಗೆ ಅಟ್ಟಿದೆ. ಆದರೆ ಪ್ರತಿ ದಿನ ಬೆಳಗ್ಗೆ ಎದ್ದು ಶಾಲೆಗಳಿಗೆ ಭೇಟಿ ನೀಡುತ್ತಿದ್ದ ನಾಯಕರು ಅವರಾಗಿದ್ದಾರೆ. ಭ್ರಷ್ಟ ನಾಯಕರಾಗಿದ್ದರೆ ಹಾಗೇ ಮಾಡುತ್ತಿರಲಿಲ್ಲ ಎಂದು ಹೇಳಿದರು.

ದೆಹಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ವೈದ್ಯರು, ಎಂಜಿನಿಯರ್ ಮತ್ತು ಪೊಲೀಸ್ ಅಧಿಕಾರಿಗಳಂತಹ ಉನ್ನತ ಪದವಿ ಹೊಂದುತ್ತಿದ್ದಾರೆ. ಈ ಶಿಕ್ಷಣ ಬದಲಾವಣೆಯ ಹಿಂದೆ ಓರ್ವ ವ್ಯಕ್ತಿ ಇದ್ದು, ಅವರೇ ಮನೀಶ್ ಸಿಸೋಡಿಯಾ ಎಂದು ಹೇಳಿದರು.

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

5 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

6 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

6 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago