ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಶಾಲೆಗಳ ಆಧುನೀಕರಣಕ್ಕೆ ಮನೀಶ್ ಸಿಸೋಡಿಯಾ ಕಾರಣ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಪ್ರತಿ ದಿನ ಮುಂಜಾನೆ ಆರು ಗಂಟೆಗೆ ಎದ್ದು ತಪಾಸಣೆಗೆ ತೆರಳುವ ಸಿಸೋಡಿಯಾ ಅವರಿಂದಲೇ ಕಳೆದ ಎಂಟು ವರ್ಷಗಳಲ್ಲಿ ದೆಹಲಿ ಸರ್ಕಾರಿ ಶಾಲೆಗಳು ಬದಲಾವಣೆಯಾಗಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.
ಪೂರ್ವ ವಿನೋದ್ ನಗರದಲ್ಲಿ ರಾಜ್ಕೀಯ ಸರ್ವೋದಯ ಕನ್ಯಾ ಬಾಲ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೇರವೇರಿಸಿ ಮಾತನಾಡಿದ ಅವರು, ಶಾಲೆ ಸಂಪೂರ್ಣ ನಿರ್ಮಾಣವಾದ ಬಳಿಕ ಕೊಲಂಬಿಯಾ ವಿಶ್ವವಿದ್ಯಾಲಯದಂತೆ ಕಾಣಲಿದೆ ಎಂದು ಹೇಳಿದರು.
ಭ್ರಷ್ಟಾಚಾರದ ಆರೋಪದಲ್ಲಿ ಕೇಂದ್ರವು ಸಿಸೋಡಿಯಾ ಅವರನ್ನು ಜೈಲಿಗೆ ಅಟ್ಟಿದೆ. ಆದರೆ ಪ್ರತಿ ದಿನ ಬೆಳಗ್ಗೆ ಎದ್ದು ಶಾಲೆಗಳಿಗೆ ಭೇಟಿ ನೀಡುತ್ತಿದ್ದ ನಾಯಕರು ಅವರಾಗಿದ್ದಾರೆ. ಭ್ರಷ್ಟ ನಾಯಕರಾಗಿದ್ದರೆ ಹಾಗೇ ಮಾಡುತ್ತಿರಲಿಲ್ಲ ಎಂದು ಹೇಳಿದರು.
ದೆಹಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ ವೈದ್ಯರು, ಎಂಜಿನಿಯರ್ ಮತ್ತು ಪೊಲೀಸ್ ಅಧಿಕಾರಿಗಳಂತಹ ಉನ್ನತ ಪದವಿ ಹೊಂದುತ್ತಿದ್ದಾರೆ. ಈ ಶಿಕ್ಷಣ ಬದಲಾವಣೆಯ ಹಿಂದೆ ಓರ್ವ ವ್ಯಕ್ತಿ ಇದ್ದು, ಅವರೇ ಮನೀಶ್ ಸಿಸೋಡಿಯಾ ಎಂದು ಹೇಳಿದರು.
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…