ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ ಭೀತಿಯಿಂದ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು 35 ದಿನಗಳ ಬಳಿಕ ಕೊನೆಗೂ ಎಸ್ಐಟಿ ಅಧಿಕಾರಿಗಳು ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಡ ರಾತ್ರಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲೋಕಸಭಾ ಚುನಾವಣೆಯ ಎರಡನೇ ಹಂತದ ಚುನಾವಣೆ ನಡೆದ ನಂತರ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದರು. ನಿನ್ನೆ(ಮೇ.31) ತಡರಾತ್ರಿ 12.50ರ ಸಮಯದಲ್ಲಿ ರಾಜ್ಯಕ್ಕೆ ಆಗಮಿಸಿದ ಪ್ರಜ್ವಲ್ರನ್ನು ಅಲ್ಲೇ ಮೊಕ್ಕಾಂ ಹೂಡಿದ್ದ ಎಸ್ಐಟಿ ಅಧಿಕಾರಿಗಳು ಕೇಂದ್ರ ಕೈಗಾರಿಗಾ ಭದ್ರತಾ ಸಿಬ್ಬಂದಿ ಹಾಗೂ ವಲಸೆ ಅಧಿಕಾರಿಗಳ ಸಹಾಯದಿಂದ ನಿಲ್ದಾಣದಲ್ಲಿಯೇ ಬಂಧಿಸಿದ್ದಾರೆ.
ಜರ್ಮನಿಯ ಮ್ಯೂನಿಕ್ನಿಂದ ಉಫ್ತಾನಾ ಏರ್ಲೈನ್ಸ್ ಎಲ್ಎಚ್-764 ನಿಂದ ಹೊರಟ ಅವರು ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ಕ್ಕೆ ಬಂದಿಳಿದರು.
ಬಳಿಕ ಬಂದ ಪ್ರಜ್ವಲ್ರನ್ನು ವಶಕ್ಕೆ ಪಡೆದ ಎಸ್ಐಟಿ ಅಧಿಕಾರಿಗಳು ವಿಶೇಷ ಕೊಠಡಿಗೆ ಕರೆದೊಯ್ದು ಪರಿಶೀಲನೆ ನಡೆಸಿದರು. ನಂತರ ಪ್ರಜ್ವಲ್ ಅವರ ಬೆರಳಚ್ಚು, ಫೋಟೋ ಕ್ಲಿಕ್ಕಿಸಿಕೊಂಡು ದಾಖಲಿಸಿಕೊಂಡರು.
ನಿಲ್ದಾಣದಿಂದ ಪ್ರಜ್ವಲ್ರನ್ನು ಎಸ್ಐಟಿ ಅಧಿಕಾರಿಗಳು ವಿಶೇಷ ವಾಹನದ ಮೂಲಕ ಬಳ್ಳಾರಿ ರಸ್ತೆಯಿಂದ ಅರಮನೆ ರಸ್ತೆ ಬಳಿಯಿರುವ ಎಸ್ಐಟಿ ಕಚೇರಿಗೆ ಕರೆದೊಯ್ದರು. ಮುಂಜಾಗೃತ ಕ್ರಮವಾಗಿ ಎಸ್ಐಟಿ ಕಚೇರಿ ಹಾಗೂ ರಸ್ತೆ ಸುತ್ತಲೂ ಬಿಗಿ ಭದ್ರತಾ ಕ್ರಮ ಕೈಗೊಂಡಿದ್ದರು..
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…