ಹಾವೇರಿ : ಹಿರೇಕೆರೂರು ರೈತರ ಕಡೆಯಿಂದ ಶಿವಾನಂದ ಪಾಟೀಲ್ಗೆ ಒಂದು ಕೋಟಿ ರೂ. ಕೊಡುತ್ತೇವೆ ಆತ್ಮಹತ್ಯೆ ಮಾಡಿಕೊಳ್ತಾರಾ? ಕೇಳಿ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ ಕಿಡಿಕಾರಿದ್ದಾರೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ವೇಳೆ ರೈತರ ಆತ್ಮಹತ್ಯೆಯ ಬಗ್ಗೆ ಸಚಿವ ಶಿವಾನಂದ ಪಾಟೀಲ್ ಹಗುರವಾಗಿ ಮಾತನಾಡಿದ್ದಾರೆ. ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾ ಮಾಡಬೇಕು. ಹಾವೇರಿ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಕಿತ್ತು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ರೈತ ಸಮುದಾಯವನ್ನು ಕಡೆಗಣಿಸಿದೆ. ಸಾಲು ಸಾಲು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲೆಯಲ್ಲಿ 18 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ಹಾವೇರಿ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿಲ್ಲ. ಕಳೆದ ಬಾರಿ ನಾವು ಈ ವೇಳೆಗಾಗಲೇ ರೈತರಿಗೆ ಸೌಲಭ್ಯಗಳನ್ನು ಕೊಟ್ಟಿದ್ದೆವು. ಅಡುಗೆ ಮಾಡಿಟ್ಟಿದ್ದೇವೆ ಆದರೆ ಅದನ್ನು ಜನರಿಗೆ ಬಡಿಸಲು ಆಗದಂತಹ ಸರ್ಕಾರ ಇದಾಗಿದೆ ಎಂದು ಕುಟುಕಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ ನೀರಾವರಿ ಯೋಜನೆಗಳನ್ನು ಕೂಡಾ ಜನರಿಗೆ ಈ ಸರ್ಕಾರ ತಲುಪಿಸುತ್ತಿಲ್ಲ. ವಿದ್ಯುತ್ಗೂ ಹೆಚ್ಚಿನ ದರ ವಿಧಿಸುತ್ತಿದ್ದಾರೆ. ಯಾವುದೇ ದರವನ್ನೂ ಸರ್ಕಾರ ಕಡಿಮೆ ಮಾಡುತ್ತಿಲ್ಲ. ಹಿರೇಕೆರೂರು ತಾಲೂಕಿನಲ್ಲಿ ಅಕ್ರಮವಾಗಿ ಎಂಆರ್ಪಿಗಿಂತ ಹೆಚ್ಚಿನ ದರದಲ್ಲಿ ಮದ್ಯ ಮಾರಾಟ ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಯಾವ ಕ್ರಮವನ್ನೂ ಕೈಗೊಳ್ಳುತ್ತಿಲ್ಲ ಎಂದು ದೂರಿದ್ದಾರೆ. ಈ ವೇಳೆ ಬಾರುಕೋಲನ್ನು ಬೀಸುವ ಮೂಲಕ ವಿನೂತನವಾಗಿ ಸರ್ಕಾರಕ್ಕೆ ಚಾಟಿ ಏಟು ಕೊಡುತ್ತಿದ್ದೇನೆ ಎಂದಿದ್ದಾರೆ.
ಆಪರೇಷನ್ ಹಸ್ತದ ವಿಚಾರವಾಗಿ, ಕಾಂಗ್ರೆಸ್ಗೆ ಹೋಗುವವರಿಗೆ ಲೋಕಸಭೆ ಚುನಾವಣೆ ಬಳಿಕ ಬಹಳ ಕಷ್ಟವಾಗಲಿದೆ. ಈಗಾಗಲೇ ಗೃಹ ಸಚಿವ ಜಿ.ಪರಮೇಶ್ವರ್ ಬಂದವರು ಲಾಸ್ಟ್ ಬೆಂಚ್ನಲ್ಲಿ ಕೂರಬೇಕು ಎಂದಿದ್ದಾರೆ. ಇದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…