ಪಟ್ನಾ: ಬಿಹಾರದ ಮೋತಿಹಾರಿಯಲ್ಲಿ ಕಳ್ಳಬಟ್ಟಿ ಕುಡಿದು 20 ಮಂದಿ ಮೃತಪಟ್ಟಿದ್ದಾರೆ.
ಮೋತಿಹಾರಿ ಪ್ರದೇಶದ ಲಕ್ಷ್ಮೀಪುರ, ಪಹರ್ಪುರ ಮತ್ತು ಹರ್ಸಿದ್ಧಿ ಬ್ಲಾಕ್ನಲ್ಲಿ ಹಲವು ಮಂದಿ ಕಳ್ಳಬಟ್ಟಿ ಕುಡಿದಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ನಕಲಿ ಮದ್ಯ ಸಾಗಿಸುತ್ತಿದ್ದ ಟ್ಯಾಂಕ್ ಅನ್ನು ಮೋತಿಹಾರಿಗೆ ತಂದು ಸ್ಥಳೀಯ ವ್ಯಾಪಾರಿಗಳಿಗೆ ವಿತರಿಸಿದ್ದು ದುರಂತಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
‘2016ರಿಂದ ಬಿಹಾರದಲ್ಲಿ ಮದ್ಯ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೆ, ಕಾನೂನು ಜಾರಿಯಲ್ಲಿ ಲೋಪದೋಷಗಳಿವೆ’ ಎಂದು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗವು ಬಿಹಾರ ಸರ್ಕಾರಕ್ಕೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿತ್ತು.
2022ರ ಡಿಸೆಂಬರ್ನಲ್ಲಿ ಬಿಹಾರದ ಸಾರಣ್ ಜಿಲ್ಲೆಯ ಛಪರಾದಲ್ಲಿ ಕಳ್ಳಬಟ್ಟಿ ಕುಡಿದು 70ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ಈ ವಿಚಾರವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿತ್ತು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…