ಪಟ್ನಾ: ಬಿಹಾರದ ಮೋತಿಹಾರಿಯಲ್ಲಿ ಕಳ್ಳಬಟ್ಟಿ ಕುಡಿದು 20 ಮಂದಿ ಮೃತಪಟ್ಟಿದ್ದಾರೆ.
ಮೋತಿಹಾರಿ ಪ್ರದೇಶದ ಲಕ್ಷ್ಮೀಪುರ, ಪಹರ್ಪುರ ಮತ್ತು ಹರ್ಸಿದ್ಧಿ ಬ್ಲಾಕ್ನಲ್ಲಿ ಹಲವು ಮಂದಿ ಕಳ್ಳಬಟ್ಟಿ ಕುಡಿದಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ನಕಲಿ ಮದ್ಯ ಸಾಗಿಸುತ್ತಿದ್ದ ಟ್ಯಾಂಕ್ ಅನ್ನು ಮೋತಿಹಾರಿಗೆ ತಂದು ಸ್ಥಳೀಯ ವ್ಯಾಪಾರಿಗಳಿಗೆ ವಿತರಿಸಿದ್ದು ದುರಂತಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
‘2016ರಿಂದ ಬಿಹಾರದಲ್ಲಿ ಮದ್ಯ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೆ, ಕಾನೂನು ಜಾರಿಯಲ್ಲಿ ಲೋಪದೋಷಗಳಿವೆ’ ಎಂದು ರಾಷ್ಟ್ರೀಯ ಮಾನವಹಕ್ಕುಗಳ ಆಯೋಗವು ಬಿಹಾರ ಸರ್ಕಾರಕ್ಕೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿತ್ತು.
2022ರ ಡಿಸೆಂಬರ್ನಲ್ಲಿ ಬಿಹಾರದ ಸಾರಣ್ ಜಿಲ್ಲೆಯ ಛಪರಾದಲ್ಲಿ ಕಳ್ಳಬಟ್ಟಿ ಕುಡಿದು 70ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು. ಈ ವಿಚಾರವಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿತ್ತು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…