ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಬ್ಯಾರಲ್, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.
ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ ಮೃತಪಟ್ಟ ಹಿನ್ನೆಲೆ ಪರಿಶೀಲನೆಗೆ ಮನೆಗೆ ತೆರಳಿದ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಸ್ನೇಕ್ ನರೇಶ್ ಮನೆಯಲ್ಲಿ ನೂರಾರು ನಾಗರಹಾವುಗಳು ಪತ್ತೆಯಾಗಿವೆ. ನಾಗರಹಾವು ಸೇರಿದಂತೆ ನೂರಾರು ಹಾವಿನ ಮರಿಗಳು ಸಿಕ್ಕಿವೆ.
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಬ್ಯಾರಲ್, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಹಾವುಗಳ ರಕ್ಷಣೆ ಮಾಡಿದ್ದಾರೆ. ಮನೆ ಸೇರಿದಂತೆ ಕಾರು, ಸ್ಕೂಟಿಗಳಲ್ಲೂ ನಾಗರಹಾವುಗಳು ಪತ್ತೆಯಾಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ನಾಗರಹಾವುಗಳನ್ನ ರಕ್ಷಿಸಿ ಮನೆಯಿಂದ ಕೊಂಡೊಯ್ದಿದ್ದಾರೆ.
ಸೆರೆ ಹಿಡಿದ ನಾಗರಹಾವು ಕಚ್ಚಿ ಸ್ನೇಕ್ ನರೇಶ್ ಸಾವನ್ನಪ್ಪಿದ್ದಾರೆ. ನೂರಾರು ನಾಗರಹಾವುಗಳು ಮನೆಯಲ್ಲಿ ಪತ್ತೆ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಮೂಡಿದೆ.
ಈ ಹಿಂದೆ ಕೊಳಕುಮಂಡಲ ಹಾವು ಕಚ್ಚಿದ್ದ ಕಾರಣ ಬೆರಳನ್ನೇ ಕತ್ತರಿಸಿಕೊಂಡಿದ್ದ ಸ್ನೇಕ್ ನರೇಶ್, ಟೈಲರ್ ವೃತ್ತಿ ಬಿಟ್ಟು ಹಾವು ಹಿಡಿಯುವುದನ್ನೇ ಕಾಯಕ ಮಾಡಿಕೊಂಡಿದ್ದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…