ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಬ್ಯಾರಲ್, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.
ನಾಗರಹಾವು ಕಚ್ಚಿ ಉರುಗ ತಜ್ಞ ನರೇಶ್ ಮೃತಪಟ್ಟ ಹಿನ್ನೆಲೆ ಪರಿಶೀಲನೆಗೆ ಮನೆಗೆ ತೆರಳಿದ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಸ್ನೇಕ್ ನರೇಶ್ ಮನೆಯಲ್ಲಿ ನೂರಾರು ನಾಗರಹಾವುಗಳು ಪತ್ತೆಯಾಗಿವೆ. ನಾಗರಹಾವು ಸೇರಿದಂತೆ ನೂರಾರು ಹಾವಿನ ಮರಿಗಳು ಸಿಕ್ಕಿವೆ.
ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿರುವ ಸ್ನೇಕ್ ನರೇಶ್ ಮನೆಯಲ್ಲಿ ಹಾವುಗಳ ರಾಶಿ ಕಂಡು ಪೊಲೀಸರು, ಸ್ಥಳೀಯರು ಶಾಕ್ ಆಗಿದ್ದಾರೆ. ಸದ್ಯ ಬ್ಯಾರಲ್, ಚೀಲಗಳಲ್ಲಿ ಸಂಗ್ರಹಿಸಿದ್ದ ನೂರಾರು ಹಾವುಗಳ ರಕ್ಷಣೆ ಮಾಡಲಾಗಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಹಾವುಗಳ ರಕ್ಷಣೆ ಮಾಡಿದ್ದಾರೆ. ಮನೆ ಸೇರಿದಂತೆ ಕಾರು, ಸ್ಕೂಟಿಗಳಲ್ಲೂ ನಾಗರಹಾವುಗಳು ಪತ್ತೆಯಾಗಿವೆ. ಅರಣ್ಯ ಇಲಾಖೆ ಸಿಬ್ಬಂದಿ ನಾಗರಹಾವುಗಳನ್ನ ರಕ್ಷಿಸಿ ಮನೆಯಿಂದ ಕೊಂಡೊಯ್ದಿದ್ದಾರೆ.
ಸೆರೆ ಹಿಡಿದ ನಾಗರಹಾವು ಕಚ್ಚಿ ಸ್ನೇಕ್ ನರೇಶ್ ಸಾವನ್ನಪ್ಪಿದ್ದಾರೆ. ನೂರಾರು ನಾಗರಹಾವುಗಳು ಮನೆಯಲ್ಲಿ ಪತ್ತೆ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಮೂಡಿದೆ.
ಈ ಹಿಂದೆ ಕೊಳಕುಮಂಡಲ ಹಾವು ಕಚ್ಚಿದ್ದ ಕಾರಣ ಬೆರಳನ್ನೇ ಕತ್ತರಿಸಿಕೊಂಡಿದ್ದ ಸ್ನೇಕ್ ನರೇಶ್, ಟೈಲರ್ ವೃತ್ತಿ ಬಿಟ್ಟು ಹಾವು ಹಿಡಿಯುವುದನ್ನೇ ಕಾಯಕ ಮಾಡಿಕೊಂಡಿದ್ದರು.
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…
ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…