ನವದೆಹಲಿ: 2002ರ ಗುಜರಾತ್ ಗಲಭೆ ಪ್ರಕರಣಗಳಲ್ಲಿ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಎಫ್ಐಆರ್ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರ ಸಾಮಾಜಿಕ ಹೋರಾಟರಾರ್ತಿ ತೀಸ್ತಾ ಸೆಟಲ್ವಾಡ್ ಜಾಮೀನು ಮಂಜೂರು ಮಾಡಿದೆ.
ಆಕೆಗೆ ಜಾಮೀನು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಜಾಮೀನು ಅವಧಿಯಲ್ಲಿ ಸೆಟಲ್ವಾಡ್ ಅವರ ಪಾಸ್ಪೋರ್ಟ್ ವಿಚಾರಣಾ ನ್ಯಾಯಾಲಯದಲ್ಲಿ ಇರಿಸುವಂತೆ ನ್ಯಾಯಾಲಯ ಸೂಚಿಸಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನವನ್ನು ಮಾಡುವುದಿಲ್ಲ ಮತ್ತು ಗುಜರಾತ್ನಲ್ಲಿರುವ ಸಾಕ್ಷಿಗಳಿಂದ ದೂರ ಉಳಿಯಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ.
ಒಂದು ವೇಳೆ ಆಕೆ ಈ ಷರತ್ತನ್ನು ಉಲ್ಲಂಘಿಸಿರುವುದು ಕಂಡುಬಂದರೆ, ಗುಜರಾತ್ ಪೊಲೀಸರಿಗೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸುವ ಮೂಲಕ ಜಾಮೀನು ರದ್ದುಗೊಳಿಸಲು ಕೋರ್ಟ್ ಅನುಮತಿ ನೀಡಿದೆ.
ಕಳೆದ ವರ್ಷ ಸೆಪ್ಟೆಂಬರ್ 2 ರಂದು, ಸುಪ್ರೀಂ ಕೋರ್ಟ್ ಆಕೆಗೆ ಮಧ್ಯಂತರ ಜಾಮೀನು ನೀಡಿದ್ದು, ಆಕೆ ಮಹಿಳೆ ಮತ್ತು ಹೆಚ್ಚಿನ ಸಾಕ್ಷ್ಯಾಧಾರಗಳು 2002 ರ ಪ್ರಕರಣಕ್ಕೆ ಸಂಬಂಧಿಸಿವೆ. ಈ ಷರತ್ತುಗಳು ಇಂದಿಗೂ ಪ್ರಸ್ತುತವಾಗಿರುವ ಕಾರಣ ಅವರಿಗೆ ಜಾಮೀನು ನೀಡಲು ನಿರ್ಧರಿಸಿದೆ.
(ಮಾಹಿತಿ ನಿರೀಕ್ಷಿಸಲಾಗಿದೆ)
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…