ನವದೆಹಲಿ : ಸಂವಿಧಾನದ ವಿರುದ್ಧ ನಡೆಯುತ್ತಿರುವ ದಾಳಿಯ ವಿರುದ್ಧ ಕಳವಳ ವ್ಯಕ್ತಪಡಿಸಿರುವ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, ” ನೂತನ ಸಂಸತ್ ಭವನದ ಕಾರ್ಯಕಲಾಪಗಳ ಆರಂಭದ ದಿನದಂದು ರಾಜಕಾರಣಿಗಳಿಗೆ ವಿತರಿಸಲಾಗಿರುವ ನೂತನ ಸಂವಿಧಾನ ಪ್ರತಿಗಳಲ್ಲಿ ‘ಸಮಾಜವಾದಿ’, ‘ಜಾತ್ಯತೀತ’ ಪದಗಳು ಕಣ್ಮರೆಯಾಗಿವೆ ಎಂದು ಆರೋಪಿಸಿದ್ದಾರೆ ಎಂದು ndtv.com ವರದಿ ಮಾಡಿದೆ.
ಸೆ. 19ರಂದು ನಮಗೆ ನೀಡಲಾದ ನೂತನ ಸಂವಿಧಾನ ಪ್ರತಿಗಳ ಸಂವಿಧಾನ ಪೀಠಿಕೆಯಲ್ಲಿ ‘ಸಮಾಜವಾದಿ, ಜಾತ್ಯತೀತ’ ಪದಗಳು ಇರಲಿಲ್ಲ ಎಂದು ಅವರು ಮಂಗಳವಾರ ANI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
“1976ರಲ್ಲಿ ಆ ಪದಗಳನ್ನು ತಿದ್ದುಪಡಿಯ ನಂತರ ಸಂವಿಧಾನ ಪೀಠಿಕೆಗೆ ಸೇರ್ಪಡೆ ಮಾಡಲಾಯಿತು ಎಂಬ ಸಂಗತಿ ನಮಗೆ ತಿಳಿದಿದೆ. ಆದರೆ, ಈಗ ಆ ಪದಗಳಿಲ್ಲದ ಸಂವಿಧಾನ ಪ್ರತಿಯನ್ನು ನೀಡಿದರೆ ಅದು ಕಳವಳಕಾರಿ ಸಂಗತಿಯಾಗಿದೆ” ಎಂದೂ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
“ಅವರ ಉದ್ದೇಶಗಳು ಸಂಶಯಾಸ್ಪದವಾಗಿವೆ. ಇದನ್ನು ತುಂಬಾ ಜಾಣ್ಮೆಯಿಂದ ಮಾಡಲಾಗಿದೆ. ಇದು ನನ್ನ ಪಾಲಿಗೆ ಕಳವಳಕಾರಿ ಸಂಗತಿಯಾಗಿದೆ” ಎಂದು ಅವರು ಆರೋಪಿಸಿದ್ದಾರೆ.
“ನಾನು ಈ ವಿಷಯವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದೆನಾದರೂ, ಅದಕ್ಕೆ ನನಗೆ ಅವಕಾಶ ದೊರೆಯಲಿಲ್ಲ” ಎಂದೂ ಅವರು ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…