BREAKING NEWS

ಸಂವಿಧಾನದ ಹೊಸ ಪ್ರತಿಗಳಲ್ಲಿ ಸಮಾಜವಾದಿ, ಜಾತ್ಯತೀತ ಪದಗಳು ಕಣ್ಮರೆ: ರಂಜನ್ ಚೌಧರಿ ಆರೋಪ

ನವದೆಹಲಿ : ಸಂವಿಧಾನದ ವಿರುದ್ಧ ನಡೆಯುತ್ತಿರುವ ದಾಳಿಯ ವಿರುದ್ಧ ಕಳವಳ ವ್ಯಕ್ತಪಡಿಸಿರುವ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, ” ನೂತನ ಸಂಸತ್ ಭವನದ ಕಾರ್ಯಕಲಾಪಗಳ ಆರಂಭದ ದಿನದಂದು ರಾಜಕಾರಣಿಗಳಿಗೆ ವಿತರಿಸಲಾಗಿರುವ ನೂತನ ಸಂವಿಧಾನ ಪ್ರತಿಗಳಲ್ಲಿ ‘ಸಮಾಜವಾದಿ’, ‘ಜಾತ್ಯತೀತ’ ಪದಗಳು ಕಣ್ಮರೆಯಾಗಿವೆ ಎಂದು ಆರೋಪಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಸೆ. 19ರಂದು ನಮಗೆ ನೀಡಲಾದ ನೂತನ ಸಂವಿಧಾನ ಪ್ರತಿಗಳ ಸಂವಿಧಾನ ಪೀಠಿಕೆಯಲ್ಲಿ ‘ಸಮಾಜವಾದಿ, ಜಾತ್ಯತೀತ’ ಪದಗಳು ಇರಲಿಲ್ಲ ಎಂದು ಅವರು ಮಂಗಳವಾರ ANI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

“1976ರಲ್ಲಿ ಆ ಪದಗಳನ್ನು ತಿದ್ದುಪಡಿಯ ನಂತರ ಸಂವಿಧಾನ ಪೀಠಿಕೆಗೆ ಸೇರ್ಪಡೆ ಮಾಡಲಾಯಿತು ಎಂಬ ಸಂಗತಿ ನಮಗೆ ತಿಳಿದಿದೆ. ಆದರೆ, ಈಗ ಆ ಪದಗಳಿಲ್ಲದ ಸಂವಿಧಾನ ಪ್ರತಿಯನ್ನು ನೀಡಿದರೆ ಅದು ಕಳವಳಕಾರಿ ಸಂಗತಿಯಾಗಿದೆ” ಎಂದೂ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಅವರ ಉದ್ದೇಶಗಳು ಸಂಶಯಾಸ್ಪದವಾಗಿವೆ. ಇದನ್ನು ತುಂಬಾ ಜಾಣ್ಮೆಯಿಂದ ಮಾಡಲಾಗಿದೆ. ಇದು ನನ್ನ ಪಾಲಿಗೆ ಕಳವಳಕಾರಿ ಸಂಗತಿಯಾಗಿದೆ” ಎಂದು ಅವರು ಆರೋಪಿಸಿದ್ದಾರೆ.

“ನಾನು ಈ ವಿಷಯವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದೆನಾದರೂ, ಅದಕ್ಕೆ ನನಗೆ ಅವಕಾಶ ದೊರೆಯಲಿಲ್ಲ” ಎಂದೂ ಅವರು ಹೇಳಿದ್ದಾರೆ.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

1 hour ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

1 hour ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

2 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 hours ago