ನವದೆಹಲಿ : ಸಂವಿಧಾನದ ವಿರುದ್ಧ ನಡೆಯುತ್ತಿರುವ ದಾಳಿಯ ವಿರುದ್ಧ ಕಳವಳ ವ್ಯಕ್ತಪಡಿಸಿರುವ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, ” ನೂತನ ಸಂಸತ್ ಭವನದ ಕಾರ್ಯಕಲಾಪಗಳ ಆರಂಭದ ದಿನದಂದು ರಾಜಕಾರಣಿಗಳಿಗೆ ವಿತರಿಸಲಾಗಿರುವ ನೂತನ ಸಂವಿಧಾನ ಪ್ರತಿಗಳಲ್ಲಿ ‘ಸಮಾಜವಾದಿ’, ‘ಜಾತ್ಯತೀತ’ ಪದಗಳು ಕಣ್ಮರೆಯಾಗಿವೆ ಎಂದು ಆರೋಪಿಸಿದ್ದಾರೆ ಎಂದು ndtv.com ವರದಿ ಮಾಡಿದೆ.
ಸೆ. 19ರಂದು ನಮಗೆ ನೀಡಲಾದ ನೂತನ ಸಂವಿಧಾನ ಪ್ರತಿಗಳ ಸಂವಿಧಾನ ಪೀಠಿಕೆಯಲ್ಲಿ ‘ಸಮಾಜವಾದಿ, ಜಾತ್ಯತೀತ’ ಪದಗಳು ಇರಲಿಲ್ಲ ಎಂದು ಅವರು ಮಂಗಳವಾರ ANI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
“1976ರಲ್ಲಿ ಆ ಪದಗಳನ್ನು ತಿದ್ದುಪಡಿಯ ನಂತರ ಸಂವಿಧಾನ ಪೀಠಿಕೆಗೆ ಸೇರ್ಪಡೆ ಮಾಡಲಾಯಿತು ಎಂಬ ಸಂಗತಿ ನಮಗೆ ತಿಳಿದಿದೆ. ಆದರೆ, ಈಗ ಆ ಪದಗಳಿಲ್ಲದ ಸಂವಿಧಾನ ಪ್ರತಿಯನ್ನು ನೀಡಿದರೆ ಅದು ಕಳವಳಕಾರಿ ಸಂಗತಿಯಾಗಿದೆ” ಎಂದೂ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
“ಅವರ ಉದ್ದೇಶಗಳು ಸಂಶಯಾಸ್ಪದವಾಗಿವೆ. ಇದನ್ನು ತುಂಬಾ ಜಾಣ್ಮೆಯಿಂದ ಮಾಡಲಾಗಿದೆ. ಇದು ನನ್ನ ಪಾಲಿಗೆ ಕಳವಳಕಾರಿ ಸಂಗತಿಯಾಗಿದೆ” ಎಂದು ಅವರು ಆರೋಪಿಸಿದ್ದಾರೆ.
“ನಾನು ಈ ವಿಷಯವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದೆನಾದರೂ, ಅದಕ್ಕೆ ನನಗೆ ಅವಕಾಶ ದೊರೆಯಲಿಲ್ಲ” ಎಂದೂ ಅವರು ಹೇಳಿದ್ದಾರೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…