BREAKING NEWS

ಸಂವಿಧಾನದ ಹೊಸ ಪ್ರತಿಗಳಲ್ಲಿ ಸಮಾಜವಾದಿ, ಜಾತ್ಯತೀತ ಪದಗಳು ಕಣ್ಮರೆ: ರಂಜನ್ ಚೌಧರಿ ಆರೋಪ

ನವದೆಹಲಿ : ಸಂವಿಧಾನದ ವಿರುದ್ಧ ನಡೆಯುತ್ತಿರುವ ದಾಳಿಯ ವಿರುದ್ಧ ಕಳವಳ ವ್ಯಕ್ತಪಡಿಸಿರುವ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, ” ನೂತನ ಸಂಸತ್ ಭವನದ ಕಾರ್ಯಕಲಾಪಗಳ ಆರಂಭದ ದಿನದಂದು ರಾಜಕಾರಣಿಗಳಿಗೆ ವಿತರಿಸಲಾಗಿರುವ ನೂತನ ಸಂವಿಧಾನ ಪ್ರತಿಗಳಲ್ಲಿ ‘ಸಮಾಜವಾದಿ’, ‘ಜಾತ್ಯತೀತ’ ಪದಗಳು ಕಣ್ಮರೆಯಾಗಿವೆ ಎಂದು ಆರೋಪಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಸೆ. 19ರಂದು ನಮಗೆ ನೀಡಲಾದ ನೂತನ ಸಂವಿಧಾನ ಪ್ರತಿಗಳ ಸಂವಿಧಾನ ಪೀಠಿಕೆಯಲ್ಲಿ ‘ಸಮಾಜವಾದಿ, ಜಾತ್ಯತೀತ’ ಪದಗಳು ಇರಲಿಲ್ಲ ಎಂದು ಅವರು ಮಂಗಳವಾರ ANI ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

“1976ರಲ್ಲಿ ಆ ಪದಗಳನ್ನು ತಿದ್ದುಪಡಿಯ ನಂತರ ಸಂವಿಧಾನ ಪೀಠಿಕೆಗೆ ಸೇರ್ಪಡೆ ಮಾಡಲಾಯಿತು ಎಂಬ ಸಂಗತಿ ನಮಗೆ ತಿಳಿದಿದೆ. ಆದರೆ, ಈಗ ಆ ಪದಗಳಿಲ್ಲದ ಸಂವಿಧಾನ ಪ್ರತಿಯನ್ನು ನೀಡಿದರೆ ಅದು ಕಳವಳಕಾರಿ ಸಂಗತಿಯಾಗಿದೆ” ಎಂದೂ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಅವರ ಉದ್ದೇಶಗಳು ಸಂಶಯಾಸ್ಪದವಾಗಿವೆ. ಇದನ್ನು ತುಂಬಾ ಜಾಣ್ಮೆಯಿಂದ ಮಾಡಲಾಗಿದೆ. ಇದು ನನ್ನ ಪಾಲಿಗೆ ಕಳವಳಕಾರಿ ಸಂಗತಿಯಾಗಿದೆ” ಎಂದು ಅವರು ಆರೋಪಿಸಿದ್ದಾರೆ.

“ನಾನು ಈ ವಿಷಯವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದೆನಾದರೂ, ಅದಕ್ಕೆ ನನಗೆ ಅವಕಾಶ ದೊರೆಯಲಿಲ್ಲ” ಎಂದೂ ಅವರು ಹೇಳಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago