ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥಕ್ಕೆ ದೇವಸ್ಥಾನದ ಆವರಣದಲ್ಲಿ ಅದ್ದೂರಿ ಸ್ವಾಗತ
ಮೈಸೂರು:ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕಾ (ಮಣ್ಣು) ಬಳಸುವ ಉದ್ದೇಶದಿಂದ ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು.
ಬನ್ನಿ ನಾಡ ಕಟ್ಟೋಣ ಎಂಬ ಸಂದೇಶ ಹೊತ್ತು ಬಂದ ರಥವನ್ನು ಚಾಮುಂಡಿ ಬೆಟ್ಟದಲ್ಲಿ ಪೂರ್ಣ ಕುಂಬದೊಂದಿಗೆ ಸ್ವಾಗತಿಸಲಾಯಿತು.ಈ ವೇಳೆ ಮಾತನಾಡಿದ ಸಚಿವರು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 11ರಂದು ಅನಾವರಣಗೊಳಿಸಲಿದ್ದಾರೆ. ಉದ್ಯಾನಕ್ಕೆ ಜಿಲ್ಲೆಯ ನಾನಾ ಭಾಗಗಳಿಂದ ಪವಿತ್ರ ಮಣ್ಣು ಸಂಗ್ರಹಿಸಲಾಗುತ್ತದೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವರಾದ ಡಾ. ಕೆ.ಸುಧಾಕರ್, ಶಾಸಕರಾದ ನಾಗೇಂದ್ರ, ರಾಮದಾಸ್, ಸಂಸದರಾದ ಪ್ರತಾಪ್ ಸಿಂಹ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಜೊತೆಯಲ್ಲಿದ್ದರು.
ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್ಗಳಿಗೆ…
ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್…
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…