BREAKING NEWS

ಕೆಂಪೇಗೌಡ  ಪ್ರತಿಮೆಯ ಆವರಣದ ಉದ್ಯಾನಕ್ಕೆ ಚಾಮುಂಡಿ ಸನ್ನಿಧಿಯ ಮಣ್ಣು

 ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥಕ್ಕೆ  ದೇವಸ್ಥಾನದ ಆವರಣದಲ್ಲಿ ಅದ್ದೂರಿ ಸ್ವಾಗತ

ಮೈಸೂರು:ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕಾ (ಮಣ್ಣು) ಬಳಸುವ ಉದ್ದೇಶದಿಂದ ಮೈಸೂರಿಗೆ ಆಗಮಿಸಿದ ಕೆಂಪೇಗೌಡ ರಥಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು.

ಬನ್ನಿ ನಾಡ ಕಟ್ಟೋಣ ಎಂಬ ಸಂದೇಶ ಹೊತ್ತು ಬಂದ ರಥವನ್ನು ಚಾಮುಂಡಿ ಬೆಟ್ಟದಲ್ಲಿ ಪೂರ್ಣ ಕುಂಬದೊಂದಿಗೆ ಸ್ವಾಗತಿಸಲಾಯಿತು.ಈ ವೇಳೆ ಮಾತನಾಡಿದ ಸಚಿವರು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 11ರಂದು ಅನಾವರಣಗೊಳಿಸಲಿದ್ದಾರೆ. ಉದ್ಯಾನಕ್ಕೆ ಜಿಲ್ಲೆಯ ನಾನಾ ಭಾಗಗಳಿಂದ ಪವಿತ್ರ ಮಣ್ಣು ಸಂಗ್ರಹಿಸಲಾಗುತ್ತದೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವರಾದ ಡಾ. ಕೆ.ಸುಧಾಕರ್, ಶಾಸಕರಾದ ನಾಗೇಂದ್ರ, ರಾಮದಾಸ್, ಸಂಸದರಾದ ಪ್ರತಾಪ್ ಸಿಂಹ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮುಖಂಡರು ಜೊತೆಯಲ್ಲಿದ್ದರು.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

5 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

6 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

6 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

6 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago