ನೂತನ ಸಂಸತ್ ಭವನದಲ್ಲಿ ಭದ್ರತಾ ಲೋಪವಾಗಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ನುಗ್ಗಿರುವ ಘಟನೆ ನಡೆದಿದೆ. ಮೈಸೂರು ಮೂಲದ ಮನೋರಂಜನ್ ಹಾಗೂ ಸಾಗರ್ ಶರ್ಮಾ ಎಂಬ ವಿದ್ಯಾರ್ಥಿಗಳು ಸದನ ನಡೆಯುವ ಸಂದರ್ಭದಲ್ಲಿ ಏಕಾಏಕಿ ಒಳನುಗ್ಗಿದ್ದಾರೆ.
ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಲ್ಲಿ ಪಾಸ್ ಪಡೆದು ಸಂಸತ್ ಪ್ರವೇಶ ಪಡೆದುಕೊಂಡಿದ್ದ ಈ ಇಬ್ಬರು ಬೆಂಚುಗಳ ಮೇಲೆ ಹತ್ತಿ ಸ್ಪೀಕರ್ನತ್ತ ಸಾಗಲು ಯತ್ನಿಸಿದ್ದರು. ಇನ್ನು ಒಳ ನುಗ್ಗಿದ ಬಳಿಕ ಶೂನಲ್ಲಿ ಇರಿಸಿದ್ದ ಡಬ್ಬಿ ಹೊರತೆಗೆದು ಅದರಲ್ಲಿದ್ದ ಬಣ್ಣದ ಹೊಗೆಯನ್ನು ಸಿಡಿಸಿದ ಈ ಇಬ್ಬರು ನೆರೆದಿದ್ದ ಸಂಸದರು ಹೆದರಿ ಓಡುವಂತೆ ಮಾಡಿದ್ದರು.
ಇನ್ನು ಈ ಇಬ್ಬರ ಪೈಕಿ ಸಾಗರ್ ಶರ್ಮಾ ಎಂಬಾತ ಸಂಸದರ ಕೈಗೆ ಸಿಕ್ಕಿದ್ದು, ಆತನಿಗೆ ಸ್ಥಳದಲ್ಲೇ ಸಂಸದರು ಥಳಿಸಿದ್ದಾರೆ. ಸಾಗರ್ ಶರ್ಮಾ ತಲೆ ಕೂದಲನ್ನು ಹಿಡಿದು ಸದನದಲ್ಲಿಯೇ ಸಂಸದರು ಹೊಡೆಯುತ್ತಿರುವ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಇನ್ನು ಬಂಧಿತರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಿಸಲಾಗಿದ್ದು, ಮನೋರಂಜನ್ನ ಮೈಸೂರು ನಿವಾಸದಲ್ಲೂ ಸಹ ವಿಚಾರಣೆ ಆರಂಭವಾಗಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…