BREAKING NEWS

ಸಂಸತ್‌ ಭವನದಲ್ಲಿ ಭದ್ರತಾ ಲೋಪ; ಸಾಗರ್‌ ಶರ್ಮಾಗೆ ಥಳಿಸಿದ ಸಂಸದರು!

ನೂತನ ಸಂಸತ್ ಭವನದಲ್ಲಿ ಭದ್ರತಾ ಲೋಪವಾಗಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ನುಗ್ಗಿರುವ ಘಟನೆ ನಡೆದಿದೆ. ಮೈಸೂರು ಮೂಲದ ಮನೋರಂಜನ್‌ ಹಾಗೂ ಸಾಗರ್‌ ಶರ್ಮಾ ಎಂಬ ವಿದ್ಯಾರ್ಥಿಗಳು ಸದನ ನಡೆಯುವ ಸಂದರ್ಭದಲ್ಲಿ ಏಕಾಏಕಿ ಒಳನುಗ್ಗಿದ್ದಾರೆ.

ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿಯಲ್ಲಿ ಪಾಸ್‌ ಪಡೆದು ಸಂಸತ್‌ ಪ್ರವೇಶ ಪಡೆದುಕೊಂಡಿದ್ದ ಈ ಇಬ್ಬರು ಬೆಂಚುಗಳ ಮೇಲೆ ಹತ್ತಿ ಸ್ಪೀಕರ್‌ನತ್ತ ಸಾಗಲು ಯತ್ನಿಸಿದ್ದರು. ಇನ್ನು ಒಳ ನುಗ್ಗಿದ ಬಳಿಕ ಶೂನಲ್ಲಿ ಇರಿಸಿದ್ದ ಡಬ್ಬಿ ಹೊರತೆಗೆದು ಅದರಲ್ಲಿದ್ದ ಬಣ್ಣದ ಹೊಗೆಯನ್ನು ಸಿಡಿಸಿದ ಈ ಇಬ್ಬರು ನೆರೆದಿದ್ದ ಸಂಸದರು ಹೆದರಿ ಓಡುವಂತೆ ಮಾಡಿದ್ದರು.

ಇನ್ನು ಈ ಇಬ್ಬರ ಪೈಕಿ ಸಾಗರ್‌ ಶರ್ಮಾ ಎಂಬಾತ ಸಂಸದರ ಕೈಗೆ ಸಿಕ್ಕಿದ್ದು, ಆತನಿಗೆ ಸ್ಥಳದಲ್ಲೇ ಸಂಸದರು ಥಳಿಸಿದ್ದಾರೆ. ಸಾಗರ್‌ ಶರ್ಮಾ ತಲೆ ಕೂದಲನ್ನು ಹಿಡಿದು ಸದನದಲ್ಲಿಯೇ ಸಂಸದರು ಹೊಡೆಯುತ್ತಿರುವ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಇನ್ನು ಬಂಧಿತರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಿಸಲಾಗಿದ್ದು, ಮನೋರಂಜನ್‌ನ ಮೈಸೂರು ನಿವಾಸದಲ್ಲೂ ಸಹ ವಿಚಾರಣೆ ಆರಂಭವಾಗಿದೆ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago