BREAKING NEWS

ಸಂಸತ್‌ ಭವನದಲ್ಲಿ ಭದ್ರತಾ ಲೋಪ; ಸಾಗರ್‌ ಶರ್ಮಾಗೆ ಥಳಿಸಿದ ಸಂಸದರು!

ನೂತನ ಸಂಸತ್ ಭವನದಲ್ಲಿ ಭದ್ರತಾ ಲೋಪವಾಗಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ನುಗ್ಗಿರುವ ಘಟನೆ ನಡೆದಿದೆ. ಮೈಸೂರು ಮೂಲದ ಮನೋರಂಜನ್‌ ಹಾಗೂ ಸಾಗರ್‌ ಶರ್ಮಾ ಎಂಬ ವಿದ್ಯಾರ್ಥಿಗಳು ಸದನ ನಡೆಯುವ ಸಂದರ್ಭದಲ್ಲಿ ಏಕಾಏಕಿ ಒಳನುಗ್ಗಿದ್ದಾರೆ.

ಮೈಸೂರು ಸಂಸದ ಪ್ರತಾಪ್‌ ಸಿಂಹ ಅವರ ಕಚೇರಿಯಲ್ಲಿ ಪಾಸ್‌ ಪಡೆದು ಸಂಸತ್‌ ಪ್ರವೇಶ ಪಡೆದುಕೊಂಡಿದ್ದ ಈ ಇಬ್ಬರು ಬೆಂಚುಗಳ ಮೇಲೆ ಹತ್ತಿ ಸ್ಪೀಕರ್‌ನತ್ತ ಸಾಗಲು ಯತ್ನಿಸಿದ್ದರು. ಇನ್ನು ಒಳ ನುಗ್ಗಿದ ಬಳಿಕ ಶೂನಲ್ಲಿ ಇರಿಸಿದ್ದ ಡಬ್ಬಿ ಹೊರತೆಗೆದು ಅದರಲ್ಲಿದ್ದ ಬಣ್ಣದ ಹೊಗೆಯನ್ನು ಸಿಡಿಸಿದ ಈ ಇಬ್ಬರು ನೆರೆದಿದ್ದ ಸಂಸದರು ಹೆದರಿ ಓಡುವಂತೆ ಮಾಡಿದ್ದರು.

ಇನ್ನು ಈ ಇಬ್ಬರ ಪೈಕಿ ಸಾಗರ್‌ ಶರ್ಮಾ ಎಂಬಾತ ಸಂಸದರ ಕೈಗೆ ಸಿಕ್ಕಿದ್ದು, ಆತನಿಗೆ ಸ್ಥಳದಲ್ಲೇ ಸಂಸದರು ಥಳಿಸಿದ್ದಾರೆ. ಸಾಗರ್‌ ಶರ್ಮಾ ತಲೆ ಕೂದಲನ್ನು ಹಿಡಿದು ಸದನದಲ್ಲಿಯೇ ಸಂಸದರು ಹೊಡೆಯುತ್ತಿರುವ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಇನ್ನು ಬಂಧಿತರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ನೇಮಿಸಲಾಗಿದ್ದು, ಮನೋರಂಜನ್‌ನ ಮೈಸೂರು ನಿವಾಸದಲ್ಲೂ ಸಹ ವಿಚಾರಣೆ ಆರಂಭವಾಗಿದೆ.

andolana

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

45 mins ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

7 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

7 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

7 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

7 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

7 hours ago