BREAKING NEWS

ಅಳಿಯ ನನ್ನ ಫೋಟೊ ಬಳಸುವಂತಿಲ್ಲ, ಬಿಜೆಪಿ ಜತೆ ಸಖ್ಯ ಇಲ್ಲ: ಪವಾರ್ ಸ್ಪಷ್ಟನೆ

ಮುಂಬೈ: ಎನ್ ಸಿಪಿ ನಾಯಕ ಶರದ್ ಪವಾರ್ ಮತ್ತು ಅಳಿಯ ಅಜಿತ್ ಪವಾರ್ ನಡುವಿನ ರಹಸ್ಯ ಭೇಟಿ ರಾಜಕೀಯ ವಿಪ್ಲವ ಸೃಷ್ಟಿಸಿ ಹಲವು ಗೊಂದಲಗಳಿಗೆ ಕಾರಣವಾದ ಬೆನ್ನಲ್ಲೇ, ಅಳಿಯ ಅಜಿತ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ಬೀಡ್ ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶರದ್ ಪವಾರ್, “ಅಜಿತ್ ಪವಾರ್ ನೇತೃತ್ವದ ಬಣ ನನ್ನ ಭಾವಚಿತ್ರವನ್ನು ಬ್ಯಾನರ್ ಹಾಗೂ ಹೋರ್ಡಿಂಗ್ ಗಳಲ್ಲಿ ಬಳಸುವುದನ್ನು ತಕ್ಷಣ ನಿಲ್ಲಿಸದಿದ್ದಲ್ಲಿ, ನ್ಯಾಯಾಂಗದ ಮೊರೆ ಹೋಗುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶಾದ್ಯಂತ ಕೋಮು ಸಾಮರಸ್ಯಕ್ಕೆ ಬಿಜೆಪಿ ಧಕ್ಕೆ ತಂದಿದೆ. ಪ್ರಧಾನಿ ನರೇಂದ್ರ ಮೋದಿಗೆ 90 ದಿನಗಳಿಂದ ಹಿಂಸಾಚಾರದಿಂದಾಗಿ ಕಂಗೆಟ್ಟಿರುವ ಮಣಿಪುರ ಸಮಸ್ಯೆಗಿಂತ 2024ರಲ್ಲಿ ಅಧಿಕಾರಕ್ಕೆ ಮರಳುವುದೇ ಚಿಂತೆಯಾಗಿದೆ ಎಂದು ಲೇವಡಿ ಮಾಡಿದರು.

ಮಾವ- ಅಳಿಯ ರಹಸ್ಯ ಭೇಟಿ ಬಳಿಕ ಪವಾರ್ ಅವರ ಮುಂದಿನ ನಡೆ ಬಗ್ಗೆ ಅನಿಶ್ಚಿತತೆಯ ಕಾರ್ಮೋಡ ಕವಿದಿತ್ತು. ಮೊದಲ ಬಾರಿಗೆ ಮಿತ್ರಪಕ್ಷಗಳಾದ ಕಾಂಗ್ರೆಸ್ ಹಾಗೂ ಶಿವಸೇನೆ (ಯುಬಿಟಿ) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದವು.

“ಪ್ರಧಾನಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಣಿಪುರ ಹಿಂಸಾಚಾರವನ್ನು ಉಲ್ಲೇಖಿಸುತ್ತಾರೆ ಎಂದು ನಿರೀಕ್ಷಿಸಿದ್ದೆ. ಆದರೆ 2019ರ ಚುನಾವಣೆಗಿಂತ ಮುನ್ನ ದೇವೇಂದ್ರ ಫಡ್ನವೀಸ್ ಮತ್ತೆ ಅಧಿಕಾರಕ್ಕೆ ಮರಳುತ್ತೇವೆ ಎಂದು ಹೇಳುತ್ತಾ ಬಂದಂತೆ ಅವರಿಂದ ಮೋದಿ ಮಾರ್ಗದರ್ಶನ ಪಡೆದಂತಿದೆ” ಎಂದು ಔರಂಗಾಬಾದ್ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಟೀಕಿಸಿದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago