BREAKING NEWS

ಅಳಿಯ ನನ್ನ ಫೋಟೊ ಬಳಸುವಂತಿಲ್ಲ, ಬಿಜೆಪಿ ಜತೆ ಸಖ್ಯ ಇಲ್ಲ: ಪವಾರ್ ಸ್ಪಷ್ಟನೆ

ಮುಂಬೈ: ಎನ್ ಸಿಪಿ ನಾಯಕ ಶರದ್ ಪವಾರ್ ಮತ್ತು ಅಳಿಯ ಅಜಿತ್ ಪವಾರ್ ನಡುವಿನ ರಹಸ್ಯ ಭೇಟಿ ರಾಜಕೀಯ ವಿಪ್ಲವ ಸೃಷ್ಟಿಸಿ ಹಲವು ಗೊಂದಲಗಳಿಗೆ ಕಾರಣವಾದ ಬೆನ್ನಲ್ಲೇ, ಅಳಿಯ ಅಜಿತ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ಬೀಡ್ ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶರದ್ ಪವಾರ್, “ಅಜಿತ್ ಪವಾರ್ ನೇತೃತ್ವದ ಬಣ ನನ್ನ ಭಾವಚಿತ್ರವನ್ನು ಬ್ಯಾನರ್ ಹಾಗೂ ಹೋರ್ಡಿಂಗ್ ಗಳಲ್ಲಿ ಬಳಸುವುದನ್ನು ತಕ್ಷಣ ನಿಲ್ಲಿಸದಿದ್ದಲ್ಲಿ, ನ್ಯಾಯಾಂಗದ ಮೊರೆ ಹೋಗುತ್ತೇನೆ” ಎಂದು ಸ್ಪಷ್ಟಪಡಿಸಿದರು.

ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶಾದ್ಯಂತ ಕೋಮು ಸಾಮರಸ್ಯಕ್ಕೆ ಬಿಜೆಪಿ ಧಕ್ಕೆ ತಂದಿದೆ. ಪ್ರಧಾನಿ ನರೇಂದ್ರ ಮೋದಿಗೆ 90 ದಿನಗಳಿಂದ ಹಿಂಸಾಚಾರದಿಂದಾಗಿ ಕಂಗೆಟ್ಟಿರುವ ಮಣಿಪುರ ಸಮಸ್ಯೆಗಿಂತ 2024ರಲ್ಲಿ ಅಧಿಕಾರಕ್ಕೆ ಮರಳುವುದೇ ಚಿಂತೆಯಾಗಿದೆ ಎಂದು ಲೇವಡಿ ಮಾಡಿದರು.

ಮಾವ- ಅಳಿಯ ರಹಸ್ಯ ಭೇಟಿ ಬಳಿಕ ಪವಾರ್ ಅವರ ಮುಂದಿನ ನಡೆ ಬಗ್ಗೆ ಅನಿಶ್ಚಿತತೆಯ ಕಾರ್ಮೋಡ ಕವಿದಿತ್ತು. ಮೊದಲ ಬಾರಿಗೆ ಮಿತ್ರಪಕ್ಷಗಳಾದ ಕಾಂಗ್ರೆಸ್ ಹಾಗೂ ಶಿವಸೇನೆ (ಯುಬಿಟಿ) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದವು.

“ಪ್ರಧಾನಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಣಿಪುರ ಹಿಂಸಾಚಾರವನ್ನು ಉಲ್ಲೇಖಿಸುತ್ತಾರೆ ಎಂದು ನಿರೀಕ್ಷಿಸಿದ್ದೆ. ಆದರೆ 2019ರ ಚುನಾವಣೆಗಿಂತ ಮುನ್ನ ದೇವೇಂದ್ರ ಫಡ್ನವೀಸ್ ಮತ್ತೆ ಅಧಿಕಾರಕ್ಕೆ ಮರಳುತ್ತೇವೆ ಎಂದು ಹೇಳುತ್ತಾ ಬಂದಂತೆ ಅವರಿಂದ ಮೋದಿ ಮಾರ್ಗದರ್ಶನ ಪಡೆದಂತಿದೆ” ಎಂದು ಔರಂಗಾಬಾದ್ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಟೀಕಿಸಿದರು.

andolanait

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

5 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

6 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

6 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

7 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

8 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

9 hours ago