ಹೊಸದಿಲ್ಲಿ : ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವು ಪ್ರಜಾಪ್ರಭುತ್ವದ ಮೂರು ಸ್ತಂಭಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು ವ್ಯವಸ್ಥಿತವಾಗಿ ಹಾನಿಗೊಳಿಸುತ್ತಿದೆ. ಪ್ರತಿಪಕ್ಷಗಳ ನಾಯಕರನ್ನು ಮಣಿಸಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಲವಂತದ ಒತ್ತಡ ಹೇರಿಕೆ ಮೂಲಕ ಧ್ವನಿ ಅಡಗಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಆರೋಪಿಸಿದ್ದಾರೆ.
ಆ್ಯನ್ ಎನ್ಫೋರ್ಸ್ಡ್ ಸೈಲೆನ್ಸ್ ಕೆನಾಟ್ ಸಾಲ್ವ್ ಇಂಡಿಯಾಸ್ ಪ್ರಾಬ್ಲಮ್ಸ್ ಎಂಬ ಶೀರ್ಷಿಕೆಯಡಿ ಹಿಂದೂ ದೈನಿಕಕ್ಕೆ ಬರೆದಿರುವ ವಿಶೇಷ ಲೇಖನದಲ್ಲಿ ಸೋನಿಯಾ ಅವರು ಕೇಂದ್ರ ಸರಕಾರದ ನಡೆಗಳನ್ನು ಕಟುವಾಗಿ ಟೀಕಿಸಿದ್ದಾರೆ. ಇದೇ ವೇಳೆ ಅವರು ಸಂವಿಧಾನದ ರಕ್ಷಣೆಗಾಗಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಕಾಂಗ್ರೆಸ್ ಕೈಜೋಡಿಸಲಿದೆ ಎಂದು ಸ್ಪಷ್ಪಪಡಿಸಿದ್ದಾರೆ.
ಬರೀ ಮೋಡಿ ಮಾಡುವ ಬಣ್ಣದ ಮಾತುಗಳಿಂದ ದೇಶದ ಸಮಸ್ಯೆಗಳನ್ನು ಪರಿಹರಿಸಲಾಗದು. ಮೋದಿ ಸರಕಾರವು ಇತ್ತೀಚಿನ ಬಜೆಟ್ ಅಧಿವೇಶನವನ್ನು ವ್ಯವಸ್ಥಿತವಾಗಿ ಹಳ್ಳಹಿಡಿಸಿತು. ನಿರುದ್ಯೋಗ, ಹಣದುಬ್ಬರ, ಅದಾನಿ ಹಗರಣಗಳನ್ನು ಪ್ರಸ್ತಾಪಿಸಿ, ಚರ್ಚೆ ನಡೆಸಲು ಪ್ರತಿಪಕ್ಷಗಳಿಗೆ ಅವಕಾಶವೇ ನೀಡಲಿಲ್ಲ. ಯಾವುದೇ ಗಂಭೀರ ಚರ್ಚೆ ಇಲ್ಲದೆಯೇ 45 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ಅನ್ನು ಅಂಗೀಕರಿಸಲಾಯಿತು,ಎಂದು ಲೇಖನದಲ್ಲಿ ಬರೆದುಕೊಂಡಿದ್ದಾರೆ.
ಪ್ರತಿಪಕ್ಷಗಳ ವಿರುದ್ಧ ತನಿಖಾ ಅಸ್ತ್ರ : ಕೇಂದ್ರ ಸರಕಾರವು ಪ್ರತಿಪಕ್ಷಗಳ ನಾಯಕರನ್ನು ಹಣಿಯಲು ತನಿಖಾ ಅಸ್ತ್ರ ಬಳಸುತ್ತಿದೆ. ಇ.ಡಿ, ಸಿಬಿಐ ಅಂಥಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಶೇ 95ರಷ್ಟು ರಾಜಕೀಯ ಪ್ರಕರಣಗಳನ್ನು ಪ್ರತಿಪಕ್ಷಗಳ ವಿರುದ್ಧ ದಾಖಲಿಸಲಾಗಿದೆ. ಬಿಜೆಪಿ ಸೇರುವವರ ವಿರುದ್ಧದ ಪ್ರಕರಣಗಳನ್ನು ನಾಜೂಕಾಗಿಯೇ ಕೈಬಿಡಲಾಗುತ್ತಿದೆ, ಎಂದು ಆರೋಪಿಸಿದ್ದಾರೆ.
ಮೋದಿಯವರ ಉದ್ಯಮ ಮಿತ್ರರ ಮಿತ್ರರ ಆರ್ಥಿಕ ಶಕ್ತಿಯಿಂದ, ಸರಕಾರದ ರಾಜಕೀಯ ಬೆದರಿಕೆಯಿಂದ ಮಾಧ್ಯಮಗಳ ಸ್ವಾತಂತ್ರ್ಯವೂ ರಾಜಿಗೊಂಡಿದೆ. ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುವ ಸಂಜೆಯ ರಾಜಕೀಯ ಚರ್ಚೆಗಳು ಬಹುತೇಕ ಏಕಪಕ್ಷೀಯವಾಗಿವೆ ಎಂದು ಸೋನಿಯಾ ಅವರು ಲೇಖನದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…
ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…