BREAKING NEWS

ಮೋದಿ ಸರಕಾರದಿಂದ ಪ್ರಜಾತಂತ್ರಕ್ಕೆ ಕುತ್ತು : ಸೋನಿಯಾ ಗಾಂಧಿ ಆರೋಪ

ಹೊಸದಿಲ್ಲಿ : ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವು ಪ್ರಜಾಪ್ರಭುತ್ವದ ಮೂರು ಸ್ತಂಭಗಳಾದ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು ವ್ಯವಸ್ಥಿತವಾಗಿ ಹಾನಿಗೊಳಿಸುತ್ತಿದೆ. ಪ್ರತಿಪಕ್ಷಗಳ ನಾಯಕರನ್ನು ಮಣಿಸಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಲವಂತದ ಒತ್ತಡ ಹೇರಿಕೆ ಮೂಲಕ ಧ್ವನಿ ಅಡಗಿಸಲಾಗುತ್ತಿದೆ ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಆರೋಪಿಸಿದ್ದಾರೆ.

ಆ್ಯನ್‌ ಎನ್‌ಫೋರ್ಸ್ಡ್ ಸೈಲೆನ್ಸ್‌ ಕೆನಾಟ್‌ ಸಾಲ್ವ್ ಇಂಡಿಯಾಸ್‌ ಪ್ರಾಬ್ಲಮ್ಸ್‌ ಎಂಬ ಶೀರ್ಷಿಕೆಯಡಿ ಹಿಂದೂ ದೈನಿಕಕ್ಕೆ ಬರೆದಿರುವ ವಿಶೇಷ ಲೇಖನದಲ್ಲಿ ಸೋನಿಯಾ ಅವರು ಕೇಂದ್ರ ಸರಕಾರದ ನಡೆಗಳನ್ನು ಕಟುವಾಗಿ ಟೀಕಿಸಿದ್ದಾರೆ. ಇದೇ ವೇಳೆ ಅವರು ಸಂವಿಧಾನದ ರಕ್ಷಣೆಗಾಗಿ ಸಮಾನ ಮನಸ್ಕ ಪಕ್ಷಗಳೊಂದಿಗೆ ಕಾಂಗ್ರೆಸ್‌ ಕೈಜೋಡಿಸಲಿದೆ ಎಂದು ಸ್ಪಷ್ಪಪಡಿಸಿದ್ದಾರೆ.

ಬರೀ ಮೋಡಿ ಮಾಡುವ ಬಣ್ಣದ ಮಾತುಗಳಿಂದ ದೇಶದ ಸಮಸ್ಯೆಗಳನ್ನು ಪರಿಹರಿಸಲಾಗದು. ಮೋದಿ ಸರಕಾರವು ಇತ್ತೀಚಿನ ಬಜೆಟ್‌ ಅಧಿವೇಶನವನ್ನು ವ್ಯವಸ್ಥಿತವಾಗಿ ಹಳ್ಳಹಿಡಿಸಿತು. ನಿರುದ್ಯೋಗ, ಹಣದುಬ್ಬರ, ಅದಾನಿ ಹಗರಣಗಳನ್ನು ಪ್ರಸ್ತಾಪಿಸಿ, ಚರ್ಚೆ ನಡೆಸಲು ಪ್ರತಿಪಕ್ಷಗಳಿಗೆ ಅವಕಾಶವೇ ನೀಡಲಿಲ್ಲ. ಯಾವುದೇ ಗಂಭೀರ ಚರ್ಚೆ ಇಲ್ಲದೆಯೇ 45 ಲಕ್ಷ ಕೋಟಿ ರೂ. ಮೊತ್ತದ ಬಜೆಟ್‌ಅನ್ನು ಅಂಗೀಕರಿಸಲಾಯಿತು,ಎಂದು ಲೇಖನದಲ್ಲಿ ಬರೆದುಕೊಂಡಿದ್ದಾರೆ.
ಪ್ರತಿಪಕ್ಷಗಳ ವಿರುದ್ಧ ತನಿಖಾ ಅಸ್ತ್ರ : ಕೇಂದ್ರ ಸರಕಾರವು ಪ್ರತಿಪಕ್ಷಗಳ ನಾಯಕರನ್ನು ಹಣಿಯಲು ತನಿಖಾ ಅಸ್ತ್ರ ಬಳಸುತ್ತಿದೆ. ಇ.ಡಿ, ಸಿಬಿಐ ಅಂಥಹ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಶೇ 95ರಷ್ಟು ರಾಜಕೀಯ ಪ್ರಕರಣಗಳನ್ನು ಪ್ರತಿಪಕ್ಷಗಳ ವಿರುದ್ಧ ದಾಖಲಿಸಲಾಗಿದೆ. ಬಿಜೆಪಿ ಸೇರುವವರ ವಿರುದ್ಧದ ಪ್ರಕರಣಗಳನ್ನು ನಾಜೂಕಾಗಿಯೇ ಕೈಬಿಡಲಾಗುತ್ತಿದೆ, ಎಂದು ಆರೋಪಿಸಿದ್ದಾರೆ.

ಮೋದಿಯವರ ಉದ್ಯಮ ಮಿತ್ರರ ಮಿತ್ರರ ಆರ್ಥಿಕ ಶಕ್ತಿಯಿಂದ, ಸರಕಾರದ ರಾಜಕೀಯ ಬೆದರಿಕೆಯಿಂದ ಮಾಧ್ಯಮಗಳ ಸ್ವಾತಂತ್ರ್ಯವೂ ರಾಜಿಗೊಂಡಿದೆ. ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುವ ಸಂಜೆಯ ರಾಜಕೀಯ ಚರ್ಚೆಗಳು ಬಹುತೇಕ ಏಕಪಕ್ಷೀಯವಾಗಿವೆ ಎಂದು ಸೋನಿಯಾ ಅವರು ಲೇಖನದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

lokesh

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

3 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

3 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

6 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

6 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

6 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

6 hours ago