BREAKING NEWS

ಸೌಜನ್ಯ ಹತ್ಯೆ ಪ್ರಕರಣ: ಮರುತನಿಖೆಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ವೀರೇಂದ್ರ ಹೆಗ್ಗಡೆ ಕುಟುಂಬ

ಬೆಂಗಳೂರು : ವಿದ್ಯಾರ್ಥಿನಿ ಸೌಜನ್ಯ ಹತ್ಯೆ ಮತ್ತು ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕುಟುಂಬದವರನ್ನು ಸ್ಥಾಪಿತ ಹಿತಾಸಕ್ತಿಗಳು ಅವಹೇಳನ ಮಾಡುತ್ತಿರುವ ಬೆಳವಣಿಗೆಗಳು ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಸೌಜನ್ಯ ಕೇಸ್‍ನಲ್ಲಿ ನ್ಯಾಯ ಒದಗಿಸಲು ಮತ್ತೆ ಯಾವುದಾದರೂ ತನಿಖೆ ನಡೆಸಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಡಾ.ಹೆಗ್ಗಡೆ ಕುಟುಂಬದವರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕೋರ್ಟ್‍ನ ಆದೇಶಗಳನ್ನು ತಿದ್ದಿ ನಿಜವನ್ನು ಮರೆಮಾಚುತ್ತಿರುವ, ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸುತ್ತಿರುವ ಹಾಗೂ ನ್ಯಾಯಾಲಯ ಮತ್ತು ನ್ಯಾಯಮೂರ್ತಿಗಳನ್ನು ನಿಂದಿಸುತ್ತಿರುವ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಡಾ.ಹೆಗ್ಗಡೆ ಕುಟುಂಬದವರ ಪರ ಕೋರ್ಟ್‍ಗೆ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ಮನವಿ ಸಲ್ಲಿಸಲಾಗಿದೆ.

ಸೌಜನ್ಯ ಹತ್ಯೆ ಪ್ರಕರಣದ ಕುರಿತು ಈಗಾಗಲೇ ಸಿಬಿಐ ತನಿಖೆ ನಡೆಸಿ ನ್ಯಾಯಾಲಯಕ್ಕೆ ಜಾರ್ಜ್‍ಶೀಟ್ ಅನ್ನೂ ಸಲ್ಲಿಸಿದ್ದು, ಪ್ರಕರಣದಲ್ಲಿ ಬಂಧಿತ ಸಂತೋಷ್ ರಾವ್‍ನನ್ನು ನ್ಯಾಯಾಲಯವೇ ನಿರಪರಾಧಿ ಎಂದು ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ತೀವ್ರ ಪ್ರತಿಭಟನೆಗಳು ಆರಂಭವಾಗಿವೆ.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

16 mins ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 mins ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

25 mins ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

30 mins ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

35 mins ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

37 mins ago