BREAKING NEWS

ಮಲ್ಲೇಶ್ವರಂ ಮನೆ ತಲುಪಿದ ಸ್ಪಂದನಾ ಮೃತದೇಹ

ಬೆಂಗಳೂರು : ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ತಡರಾತ್ರಿ 1 ಗಂಟೆ ವೇಳೆಗೆ ಮಲ್ಲೇಶ್ವರಂನ ತವರು ಮನೆ ತಲುಪಿದೆ. ಸಾವಿನಿಂದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಗಣ್ಯರು, ಆಪ್ತರು, ಸ್ನೇಹಿತರು ಹಾಗೂ ಸಿನಿ ತಾರೆಯರು ಕಂಬನಿ ಮಿಡಿದಿದ್ದಾರೆ. ಮೃತದೇಹ ನೋಡುತ್ತಿದ್ದಂತೆಯೇ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು.

ನಟ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಹಾಗೂ ಸ್ಪಂದನಾ ಸ್ನೇಹಿತೆ ನಟಿ ಅನು ಪ್ರಭಾಕರ್‌ ಸೇರಿದಂತೆ ಹಲವು ಗಣ್ಯಮಾನ್ಯರು ಮಲ್ಲೇಶ್ವರಂನ ಮನೆಗೆ ಆಗಮಿಸಿದ್ದಾರೆ. ನಟ ವಿಜಯರಾಘವೇಂದ್ರ, ಶ್ರೀಮುರಳಿ, ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್‌, ಶಾಸಕ ಮುನಿರತ್ನ, ಮಾವ ಚಿನ್ನೇಗೌಡ ಹಲವು ಪ್ರಮುಖರು ಸ್ಥಳದಲ್ಲಿದ್ದಾರೆ. ಅಂಬುಲೆನ್ಸ್‌ ಮಲ್ಲೇಶ್ವರಂನ ತವರು ಮನೆ ತಲುಪುತ್ತಿದ್ದಂತೆ ಮೃತದೇಹ ನೋಡಲು ನೆರೆದಿದ್ದ ಜನ ಮುಗಿಬಿದ್ದರು. ಅಂಬುಲೆನ್ಸ್‌ ಬಳಿ ತಳ್ಳಾಟ, ನೂಕಾಟ ನಡೆಯಿತು.

lokesh

Recent Posts

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

47 mins ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

1 hour ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

2 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

9 hours ago