BREAKING NEWS

ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ವರಣ ಕೃಪೆ ತೋರದ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರ ಮನವಿ ಮೇರೆಗೆ ವೈದಿಕ ಡಾ.ಭಾನುಪ್ರಕಾಶ ಶರ್ಮ ನೇತೃತ್ವದಲ್ಲಿ ಮಂಗಳವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಪರ್ಜನ್ಯ ಹೋಮ ನಡೆಸಲಾಯಿತು.

ಮಳೆಗಾಗಿ ಪ್ರಾರ್ಥಿಸಿ ಕೆಆರ್‌ಎಸ್ ಡ್ಯಾಂನ ಕಾವೇರಿ ಮಾತೆ ಪ್ರತಿಮೆ ಮುಂಭಾಗ 12 ಮಂದಿ ವೈದಿಕ ತಂಡದಿಂದ ಪರ್ಜನ್ಯ ಹೋಮ ಸೇರಿದಂತೆ ವಿವಿಧ ವಿಶೇಷ ಪೂಜೆ ಮಾಡಲಾಯಿತು.

ಈ ಸಂದರ್ಭ ಮಾತನಾಡಿದ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿಲ್ಲ. ಇದರಿಂದಾಗಿ ಬೆಳೆ ಬೆಳೆದಿರುವ ರೈತರಲ್ಲಿ ತೀವ್ರ ಆತಂಕ ಮೂಡಿದೆ. ಇದರಿಂದಾಗಿ ಪರ್ಜನ್ಯ ಹೋಮ ಸೇರಿದಂತೆ ವಿವಿಧ ಬಗೆಯ ಪೂಜೆಗಳನ್ನು ಮಾಡಲಾಯಿತು ಎಂದರು.

ಈಗಾಗಲೇ ನಾಲೆಗಳಿಗೆ ನೀರು ನಿಲ್ಲಿಸಿರುವುದರಿಂದ ಬೆಳೆಗಳು ಒಣಗುತ್ತಿವೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 81 ಅಡಿಗೆ ಕುಸಿದಿದೆ. ಹೀಗಾಗಿ ಪರ್ಜನ್ಯ ಹೋಮದ ಮೊರೆ ಹೋಗಬೇಕಾಯಿತು ಎಂದು ಹೇಳಿದರು.

ಪರ್ಜನ್ಯ ಹೋಮ ನಡೆಸಿದಾಗಲೆಲ್ಲ ಉತ್ತಮ ಮಳೆಯಾಗಿ ಡ್ಯಾಂ ಭರ್ತಿಯಾಗಿದೆ. 2021 ರಲ್ಲೂ ಮಳೆ ಕೈಕೊಟ್ಟಾಗ ಭಾನುಪ್ರಕಾಶ ಶರ್ಮ ನೇತೃತ್ವದಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಪೂಜೆ ನೆರವೇರಿಸಲಾಗಿತ್ತು. ಇದಾದ ಬಳಿಕ ಎರಡೇ ದಿನದಲ್ಲಿ ಮಳೆ ಸುರಿದು ಡ್ಯಾಂ ಸಂಪೂರ್ಣ ಭರ್ತಿಯಾಗಿತ್ತು ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಪೂಜೆ ಮಾಡುವಂತೆ ವೈದಿಕ ಭಾನುಪ್ರಕಾಶ ಶರ್ಮ ಅವರಲ್ಲಿ ನಾನು ಮನವಿ ಮಾಡಲಾಗಿ ಪರ್ಜನ್ಯ ಜಪ, ಹೋಮ, ಕಳಶ ಸ್ಥಾಪನೆ, ಮಹಾ ಗಣಪತಿ ಪೂಜೆ, ಪುಣ್ಯಹಾದಿ, ಆದಿತ್ಯ ಪೂಜೆ, ಮಳೆಯ ದೇವತೆಗಳ ಆಹ್ವಾಹನೆ, ರುದ್ರಾಭಿಷೇಕ ಮೂಲಮಂತ್ರಗಳನ್ನು ಜಪಿಸುತ್ತಾ ವೈದಿಕರಿಂದ ವಿಶೇಷ ಪೂಜೆ ಮಾಡಲಾಗಿದೆ ಎಂದು ವಿವರಿಸಿದರು.

lokesh

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

2 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

2 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

2 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

2 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

3 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

3 hours ago