BREAKING NEWS

ಮಳೆಗಾಗಿ ಕೆಆರ್‌ಎಸ್‌ನಲ್ಲಿ ವಿಶೇಷ ಪೂಜೆ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ವರಣ ಕೃಪೆ ತೋರದ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರ ಮನವಿ ಮೇರೆಗೆ ವೈದಿಕ ಡಾ.ಭಾನುಪ್ರಕಾಶ ಶರ್ಮ ನೇತೃತ್ವದಲ್ಲಿ ಮಂಗಳವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಪರ್ಜನ್ಯ ಹೋಮ ನಡೆಸಲಾಯಿತು.

ಮಳೆಗಾಗಿ ಪ್ರಾರ್ಥಿಸಿ ಕೆಆರ್‌ಎಸ್ ಡ್ಯಾಂನ ಕಾವೇರಿ ಮಾತೆ ಪ್ರತಿಮೆ ಮುಂಭಾಗ 12 ಮಂದಿ ವೈದಿಕ ತಂಡದಿಂದ ಪರ್ಜನ್ಯ ಹೋಮ ಸೇರಿದಂತೆ ವಿವಿಧ ವಿಶೇಷ ಪೂಜೆ ಮಾಡಲಾಯಿತು.

ಈ ಸಂದರ್ಭ ಮಾತನಾಡಿದ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿಲ್ಲ. ಇದರಿಂದಾಗಿ ಬೆಳೆ ಬೆಳೆದಿರುವ ರೈತರಲ್ಲಿ ತೀವ್ರ ಆತಂಕ ಮೂಡಿದೆ. ಇದರಿಂದಾಗಿ ಪರ್ಜನ್ಯ ಹೋಮ ಸೇರಿದಂತೆ ವಿವಿಧ ಬಗೆಯ ಪೂಜೆಗಳನ್ನು ಮಾಡಲಾಯಿತು ಎಂದರು.

ಈಗಾಗಲೇ ನಾಲೆಗಳಿಗೆ ನೀರು ನಿಲ್ಲಿಸಿರುವುದರಿಂದ ಬೆಳೆಗಳು ಒಣಗುತ್ತಿವೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 81 ಅಡಿಗೆ ಕುಸಿದಿದೆ. ಹೀಗಾಗಿ ಪರ್ಜನ್ಯ ಹೋಮದ ಮೊರೆ ಹೋಗಬೇಕಾಯಿತು ಎಂದು ಹೇಳಿದರು.

ಪರ್ಜನ್ಯ ಹೋಮ ನಡೆಸಿದಾಗಲೆಲ್ಲ ಉತ್ತಮ ಮಳೆಯಾಗಿ ಡ್ಯಾಂ ಭರ್ತಿಯಾಗಿದೆ. 2021 ರಲ್ಲೂ ಮಳೆ ಕೈಕೊಟ್ಟಾಗ ಭಾನುಪ್ರಕಾಶ ಶರ್ಮ ನೇತೃತ್ವದಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಪೂಜೆ ನೆರವೇರಿಸಲಾಗಿತ್ತು. ಇದಾದ ಬಳಿಕ ಎರಡೇ ದಿನದಲ್ಲಿ ಮಳೆ ಸುರಿದು ಡ್ಯಾಂ ಸಂಪೂರ್ಣ ಭರ್ತಿಯಾಗಿತ್ತು ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ಪೂಜೆ ಮಾಡುವಂತೆ ವೈದಿಕ ಭಾನುಪ್ರಕಾಶ ಶರ್ಮ ಅವರಲ್ಲಿ ನಾನು ಮನವಿ ಮಾಡಲಾಗಿ ಪರ್ಜನ್ಯ ಜಪ, ಹೋಮ, ಕಳಶ ಸ್ಥಾಪನೆ, ಮಹಾ ಗಣಪತಿ ಪೂಜೆ, ಪುಣ್ಯಹಾದಿ, ಆದಿತ್ಯ ಪೂಜೆ, ಮಳೆಯ ದೇವತೆಗಳ ಆಹ್ವಾಹನೆ, ರುದ್ರಾಭಿಷೇಕ ಮೂಲಮಂತ್ರಗಳನ್ನು ಜಪಿಸುತ್ತಾ ವೈದಿಕರಿಂದ ವಿಶೇಷ ಪೂಜೆ ಮಾಡಲಾಗಿದೆ ಎಂದು ವಿವರಿಸಿದರು.

lokesh

Recent Posts

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

2 hours ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

2 hours ago

ಓದುಗರ ಪತ್ರ: ಗೃಹ ಸಚಿವರೇ ಇತ್ತಲೂ ಗಮನಹರಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…

4 hours ago

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…

4 hours ago

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…

4 hours ago

ಓದುಗರ ಪತ್ರ: ಬಂಡಿಪಾಳ್ಯದಲ್ಲಿ ಅಗತ್ಯ ಶೌಚಾಲಯಗಳನ್ನು ನಿರ್ಮಿಸಿ

ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…

4 hours ago