ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ವರಣ ಕೃಪೆ ತೋರದ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರ ಮನವಿ ಮೇರೆಗೆ ವೈದಿಕ ಡಾ.ಭಾನುಪ್ರಕಾಶ ಶರ್ಮ ನೇತೃತ್ವದಲ್ಲಿ ಮಂಗಳವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ನಲ್ಲಿ ಪರ್ಜನ್ಯ ಹೋಮ ನಡೆಸಲಾಯಿತು.
ಮಳೆಗಾಗಿ ಪ್ರಾರ್ಥಿಸಿ ಕೆಆರ್ಎಸ್ ಡ್ಯಾಂನ ಕಾವೇರಿ ಮಾತೆ ಪ್ರತಿಮೆ ಮುಂಭಾಗ 12 ಮಂದಿ ವೈದಿಕ ತಂಡದಿಂದ ಪರ್ಜನ್ಯ ಹೋಮ ಸೇರಿದಂತೆ ವಿವಿಧ ವಿಶೇಷ ಪೂಜೆ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಕೆಆರ್ಎಸ್ ಡ್ಯಾಂ ಭರ್ತಿಯಾಗಿಲ್ಲ. ಇದರಿಂದಾಗಿ ಬೆಳೆ ಬೆಳೆದಿರುವ ರೈತರಲ್ಲಿ ತೀವ್ರ ಆತಂಕ ಮೂಡಿದೆ. ಇದರಿಂದಾಗಿ ಪರ್ಜನ್ಯ ಹೋಮ ಸೇರಿದಂತೆ ವಿವಿಧ ಬಗೆಯ ಪೂಜೆಗಳನ್ನು ಮಾಡಲಾಯಿತು ಎಂದರು.
ಈಗಾಗಲೇ ನಾಲೆಗಳಿಗೆ ನೀರು ನಿಲ್ಲಿಸಿರುವುದರಿಂದ ಬೆಳೆಗಳು ಒಣಗುತ್ತಿವೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 81 ಅಡಿಗೆ ಕುಸಿದಿದೆ. ಹೀಗಾಗಿ ಪರ್ಜನ್ಯ ಹೋಮದ ಮೊರೆ ಹೋಗಬೇಕಾಯಿತು ಎಂದು ಹೇಳಿದರು.
ಪರ್ಜನ್ಯ ಹೋಮ ನಡೆಸಿದಾಗಲೆಲ್ಲ ಉತ್ತಮ ಮಳೆಯಾಗಿ ಡ್ಯಾಂ ಭರ್ತಿಯಾಗಿದೆ. 2021 ರಲ್ಲೂ ಮಳೆ ಕೈಕೊಟ್ಟಾಗ ಭಾನುಪ್ರಕಾಶ ಶರ್ಮ ನೇತೃತ್ವದಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಪೂಜೆ ನೆರವೇರಿಸಲಾಗಿತ್ತು. ಇದಾದ ಬಳಿಕ ಎರಡೇ ದಿನದಲ್ಲಿ ಮಳೆ ಸುರಿದು ಡ್ಯಾಂ ಸಂಪೂರ್ಣ ಭರ್ತಿಯಾಗಿತ್ತು ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಪೂಜೆ ಮಾಡುವಂತೆ ವೈದಿಕ ಭಾನುಪ್ರಕಾಶ ಶರ್ಮ ಅವರಲ್ಲಿ ನಾನು ಮನವಿ ಮಾಡಲಾಗಿ ಪರ್ಜನ್ಯ ಜಪ, ಹೋಮ, ಕಳಶ ಸ್ಥಾಪನೆ, ಮಹಾ ಗಣಪತಿ ಪೂಜೆ, ಪುಣ್ಯಹಾದಿ, ಆದಿತ್ಯ ಪೂಜೆ, ಮಳೆಯ ದೇವತೆಗಳ ಆಹ್ವಾಹನೆ, ರುದ್ರಾಭಿಷೇಕ ಮೂಲಮಂತ್ರಗಳನ್ನು ಜಪಿಸುತ್ತಾ ವೈದಿಕರಿಂದ ವಿಶೇಷ ಪೂಜೆ ಮಾಡಲಾಗಿದೆ ಎಂದು ವಿವರಿಸಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…