BREAKING NEWS

ಎಕ್ಸ್‌ಪ್ರೆಸ್ ಹೈವೇಯಲ್ಲಿ ಸ್ಪೀಡ್‌ ಬ್ರೇಕ್‌ ಮಾಡಿದ ವಾಹನ ಸವಾರರಿಗೆ ಬಿತ್ತು ಬರೋಬ್ಬರಿ 1 ಲಕ್ಷ ರೂ. ದಂಡ

ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ವೇಗಮಿತಿ ಉಲ್ಲಂಘನೆ ಮಾಡಿ ವಾಹನ ಚಾಲನೆ ಮಾಡುತ್ತಿರುವವರ ವಿರುದ್ಧ ಮದ್ದೂರು ಪೊಲೀಸರು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ, ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. ಮದ್ದೂರು ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಮಾರ್ಗದರ್ಶನದಲ್ಲಿ ಎಕ್ಸ್‌ಪ್ರೆಸ್‌ವೇನಲ್ಲಿ ರಾಡಾರ್‌ಗನ್ ಸಮೇತ ಕಾರ್ಯಾಚರಣೆಗಿಳಿದ ಸಂಚಾರಿ ಠಾಣೆ ಪಿಎಸ್‌ಐಗಳಾದ ಸಿದ್ದರಾಜು, ಆಯ್ಯನ್‌ಗೌಡ, ಕಾನೂನು ಸುವ್ಯವಸ್ಥೆ ವಿಭಾಗದ ಪಿಎಸ್‌ಐ ಆರ್.ಬಿ. ಉಮೇಶ್ ಹಾಗೂ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ಮಿತಿ ಮೀರಿದ ವೇಗದಲ್ಲಿ ಚಾಲನೆ ಮಾಡುತ್ತಿದ್ದ ನೂರಾರು ವಾಹನಗಳ ಚಾಲಕರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ಸುಮಾರು ಒಂದು ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿ ಸಾವು-ನೋವು ಸಂಭವಿಸುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಅಪಘಾತ ತಡೆಯಲು ರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್ ಮೀತಿ ಮೀರಿದ ವೇಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವಾಹನ ಚಾಲಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶ ನೀಡಿದ್ದರು.

ಆದ್ದರಿಂದ ಪೊಲೀಸರು ಪ್ರಥಮ ಹಂತದಲ್ಲಿ ಹೆದ್ದಾರಿಯಲ್ಲಿ ಅತಿ ವೇಗದಲ್ಲಿ ವಾಹನ ಚಾಲನೆ ಮಾಡುವ ಚಾಲಕರಿಗೆ ಸ್ವಯಂ ಕಡಿವಾಣ ಹಾಕುವಂತೆ ಕರ ಪತ್ರದ ಮೂಲಕ ಜಾಗೃತಿ ಮೂಡಿಸಿದ್ದರೂ ಪ್ರಯೋಜನ ಆಗಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿ ಅತಿ ವೇಗವಾಗಿ ವಾಹನ ಚಲಾಯಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

 

lokesh

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

2 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

3 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

4 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

4 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

5 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

12 hours ago