ಬೆಂಗಳೂರು : ಕರ್ನಾಟಕದ ಮೊದಲ ಎಕ್ಸಪ್ರೆಸ್ವೇ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಅತೀ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿರುವುದರಿಂದ ವಾಹನಗಳ ವೇಗ ಮಿತಿ 100 ಜಾರಿಗೊಳಿಸಲು ಪೊಲೀಸ್ ಇಲಾಖೆ ಪ್ಲ್ಯಾನ್ ಮಾಡಿಕೊಂಡಿದೆ. ಈ ಬಗ್ಗೆ ಎಡಿಜಿಪಿ ಅಲೋಕ್ ಮೋಹನ್ ಹಾಗೂ ಮೈಸೂರು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.
ಮೊನ್ನೇ ಅಷ್ಟೇ ಅಲೋಕ್ ಮೋಹನ್ ಅವರು ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ಸಂಚರಿಸಿ ಅತಿ ಹೆಚ್ಚು ಅಪಘಾತವಾಗುವ ಸ್ಪಾಟ್ಗಳನ್ನು ಪರಿಶೀಲನೆ ಮಾಡಿದ್ದರು. ಬಳಿಕ ರಾಮನಗರದಲ್ಲಿ ಮಾತನಾಡಿದ್ದ ಅಲೋಕ್ ಮೋಹನ್, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಉದ್ಘಾಟನೆಯಾದಾಗಿನಿಂದಲೂ ಹೆಚ್ಚಿನ ಸಂಖ್ಯೆಯ ಅಪಘಾತಗಳು ಸಂಭವಿಸುತ್ತಿವೆ. ಇದನ್ನು ತಡೆಗಟ್ಟಲು 119 ಕಿಲೋಮೀಟರ್ ವರೆಗಿನ ಹೆದ್ದಾರಿಯಲ್ಲಿ ಸ್ಪೀಡ್ ರಾಡಾರ್ ಗನ್ ಮತ್ತು ವಾಹನ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್ಪಿಆರ್) ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಒಂದು ವೇಳೆ ವಾಹನ ಮಿತಿಗಿಂತ ವೇಗವಾಗಿ ಚಲಿಸುತ್ತಿದ್ದರೆ ಸ್ಪೀಡ್ ರಾಡಾರ್ ಗನ್ನಲ್ಲಿ ಸೆರೆಯಾಗಲಿದ್ದು, ವಾಹನ ಸಂಖ್ಯೆಗೆ ಮೇಲೆ ದಂಡ ವಿಧಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಮಧ್ಯಮ ಗಾತ್ರದ ವಾಹನಗಳನ್ನು ಚಾಲನೆ ಮಾಡುವವರು ಅತಿವೇದ ಅಥವಾ ಅಜಾಗರೂಕತೆಯ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡುವುದರಿಂದ ಮಾತ್ರ ಅಪಘಾತಗಳು ಸಂಭವಿಸುತ್ತವೆ. ಇದು ಅವೈಜ್ಞಾನಿಕ ರಸ್ತೆಯಿಂದಲ್ಲ. ಈ ಎಕ್ಸ್ಪ್ರೆಸ್ ವೇ ರೇಸಿಂಗ್ ಟ್ರ್ಯಾಕ್ ಅಲ್ಲ ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು. ಆದರೆ ತಡೆರಹಿತ ಪ್ರಯಾಣಕ್ಕಾಗಿ ನಿರ್ಮಾಣ ಮಾಡಲಿದೆ ಎಂಬ ಅರಿವು ಇರಬೇಕು ಎಂದಿದ್ದಾರೆ.
ಎಕ್ಸ್ಪ್ರೆಸ್ ವೇಯನ್ನು ವಾಹನಗಳು ಗಂಟೆಗೆ 120 ಕಿಮೀ ಗರಿಷ್ಠ ವೇಗದ ಮಿತಿಯೊಂದಿಗೆ ಚಲಿಸಲು ವಿನ್ಯಾಸಗೊಳಿಸಲಾಗಿದೆ. 80 ಕಿಮೀ ನಿಂದ 100 ಕಿಮೀ ವೇಗದಲ್ಲಿ ಪ್ರಯಾಣಿಸುವಾಗ ಅಪಘಾತಗಳು ಸಂಭವಿಸುವುದಿಲ್ಲ. ಇಷ್ಟು ವೇಗದಲ್ಲಿ ಪ್ರಯಾಣಿಸಿದರೂ ಒಂದೂವರೆ ಗಂಟೆಯಲ್ಲಿ ಬೆಂಗಳೂರು ತಲುಪಬಹುದು. ಜನರು 10-15 ನಿಮಿಷಗಳನ್ನು ಉಳಿಸುವುದಕ್ಕಾಗಿ ವೇಗದ ಮಿತಿಯನ್ನು ದಾಟಬಾರದು. ಐಷಾರಾಮಿ ಕಾರಿನಲ್ಲಿ, ಕೆಲವರು 140-150 ಕಿಮೀ ವೇಗದಲ್ಲಿ ಚಾಲನೆ ಮಾಡುತ್ತಿದ್ದರೆ ಅದನ್ನು ಹೇಗೆ ನಿಯಂತ್ರಿಸಬಹುದು? ಇದು ಅಪಘಾತಕ್ಕೆ ಕಾರಣವಾಗುತ್ತದೆ ಎಂದು ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ.
ವರದಿಗಳ ಪ್ರಕಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಈ ಆರು ಪಥಗಳ ಮುಖ್ಯ ಹೆದ್ದಾರಿಯಲ್ಲಿ ದ್ವಿಚಕ್ರ, ಮತ್ತು ತ್ರಿಚಕ್ರ ವಾಹನಗಳನ್ನು ನಿಷೇಧಿಸಲು ತೀರ್ಮಾನಿಸಿದ್ದು, ಸರ್ವೀಸ್ ರಸ್ತೆಯಲ್ಲಿ ಮಾತ್ರ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುಲು ನಿರ್ಧರಿಸಿದೆ.
ಈ ವರ್ಷದ ಅಂದರೆ ಮಾರ್ಚ್ನಲ್ಲಿ ಉದ್ಘಾಟನೆಗೊಂಡ ನಂತರ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಗಳ ಮೂಲಕ ತಿಳಿದುಬಂದಿದೆ.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…