ಬೆಂಗಳೂರು : ಕರ್ನಾಟಕದ ಮೊದಲ ಎಕ್ಸಪ್ರೆಸ್ವೇ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಪಘಾತಗಳನ್ನು ತಡೆಗಟ್ಟಲು ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಅತೀ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿರುವುದರಿಂದ ವಾಹನಗಳ ವೇಗ ಮಿತಿ 100 ಜಾರಿಗೊಳಿಸಲು ಪೊಲೀಸ್ ಇಲಾಖೆ ಪ್ಲ್ಯಾನ್ ಮಾಡಿಕೊಂಡಿದೆ. ಈ ಬಗ್ಗೆ ಎಡಿಜಿಪಿ ಅಲೋಕ್ ಮೋಹನ್ ಹಾಗೂ ಮೈಸೂರು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.
ಮೊನ್ನೇ ಅಷ್ಟೇ ಅಲೋಕ್ ಮೋಹನ್ ಅವರು ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ಸಂಚರಿಸಿ ಅತಿ ಹೆಚ್ಚು ಅಪಘಾತವಾಗುವ ಸ್ಪಾಟ್ಗಳನ್ನು ಪರಿಶೀಲನೆ ಮಾಡಿದ್ದರು. ಬಳಿಕ ರಾಮನಗರದಲ್ಲಿ ಮಾತನಾಡಿದ್ದ ಅಲೋಕ್ ಮೋಹನ್, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಉದ್ಘಾಟನೆಯಾದಾಗಿನಿಂದಲೂ ಹೆಚ್ಚಿನ ಸಂಖ್ಯೆಯ ಅಪಘಾತಗಳು ಸಂಭವಿಸುತ್ತಿವೆ. ಇದನ್ನು ತಡೆಗಟ್ಟಲು 119 ಕಿಲೋಮೀಟರ್ ವರೆಗಿನ ಹೆದ್ದಾರಿಯಲ್ಲಿ ಸ್ಪೀಡ್ ರಾಡಾರ್ ಗನ್ ಮತ್ತು ವಾಹನ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್ಪಿಆರ್) ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಲಾಗಿದೆ. ಒಂದು ವೇಳೆ ವಾಹನ ಮಿತಿಗಿಂತ ವೇಗವಾಗಿ ಚಲಿಸುತ್ತಿದ್ದರೆ ಸ್ಪೀಡ್ ರಾಡಾರ್ ಗನ್ನಲ್ಲಿ ಸೆರೆಯಾಗಲಿದ್ದು, ವಾಹನ ಸಂಖ್ಯೆಗೆ ಮೇಲೆ ದಂಡ ವಿಧಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದು, ಮಧ್ಯಮ ಗಾತ್ರದ ವಾಹನಗಳನ್ನು ಚಾಲನೆ ಮಾಡುವವರು ಅತಿವೇದ ಅಥವಾ ಅಜಾಗರೂಕತೆಯ ಮತ್ತು ನಿರ್ಲಕ್ಷ್ಯದ ಚಾಲನೆ ಮಾಡುವುದರಿಂದ ಮಾತ್ರ ಅಪಘಾತಗಳು ಸಂಭವಿಸುತ್ತವೆ. ಇದು ಅವೈಜ್ಞಾನಿಕ ರಸ್ತೆಯಿಂದಲ್ಲ. ಈ ಎಕ್ಸ್ಪ್ರೆಸ್ ವೇ ರೇಸಿಂಗ್ ಟ್ರ್ಯಾಕ್ ಅಲ್ಲ ಎಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕು. ಆದರೆ ತಡೆರಹಿತ ಪ್ರಯಾಣಕ್ಕಾಗಿ ನಿರ್ಮಾಣ ಮಾಡಲಿದೆ ಎಂಬ ಅರಿವು ಇರಬೇಕು ಎಂದಿದ್ದಾರೆ.
ಎಕ್ಸ್ಪ್ರೆಸ್ ವೇಯನ್ನು ವಾಹನಗಳು ಗಂಟೆಗೆ 120 ಕಿಮೀ ಗರಿಷ್ಠ ವೇಗದ ಮಿತಿಯೊಂದಿಗೆ ಚಲಿಸಲು ವಿನ್ಯಾಸಗೊಳಿಸಲಾಗಿದೆ. 80 ಕಿಮೀ ನಿಂದ 100 ಕಿಮೀ ವೇಗದಲ್ಲಿ ಪ್ರಯಾಣಿಸುವಾಗ ಅಪಘಾತಗಳು ಸಂಭವಿಸುವುದಿಲ್ಲ. ಇಷ್ಟು ವೇಗದಲ್ಲಿ ಪ್ರಯಾಣಿಸಿದರೂ ಒಂದೂವರೆ ಗಂಟೆಯಲ್ಲಿ ಬೆಂಗಳೂರು ತಲುಪಬಹುದು. ಜನರು 10-15 ನಿಮಿಷಗಳನ್ನು ಉಳಿಸುವುದಕ್ಕಾಗಿ ವೇಗದ ಮಿತಿಯನ್ನು ದಾಟಬಾರದು. ಐಷಾರಾಮಿ ಕಾರಿನಲ್ಲಿ, ಕೆಲವರು 140-150 ಕಿಮೀ ವೇಗದಲ್ಲಿ ಚಾಲನೆ ಮಾಡುತ್ತಿದ್ದರೆ ಅದನ್ನು ಹೇಗೆ ನಿಯಂತ್ರಿಸಬಹುದು? ಇದು ಅಪಘಾತಕ್ಕೆ ಕಾರಣವಾಗುತ್ತದೆ ಎಂದು ಪ್ರತಾಪ್ ಸಿಂಹ ಅಭಿಪ್ರಾಯಪಟ್ಟಿದ್ದಾರೆ.
ವರದಿಗಳ ಪ್ರಕಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಈ ಆರು ಪಥಗಳ ಮುಖ್ಯ ಹೆದ್ದಾರಿಯಲ್ಲಿ ದ್ವಿಚಕ್ರ, ಮತ್ತು ತ್ರಿಚಕ್ರ ವಾಹನಗಳನ್ನು ನಿಷೇಧಿಸಲು ತೀರ್ಮಾನಿಸಿದ್ದು, ಸರ್ವೀಸ್ ರಸ್ತೆಯಲ್ಲಿ ಮಾತ್ರ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುಲು ನಿರ್ಧರಿಸಿದೆ.
ಈ ವರ್ಷದ ಅಂದರೆ ಮಾರ್ಚ್ನಲ್ಲಿ ಉದ್ಘಾಟನೆಗೊಂಡ ನಂತರ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 100ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಗಳ ಮೂಲಕ ತಿಳಿದುಬಂದಿದೆ.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…