ರಾಮನಗರ: ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್ ರೇಡಾರ್ ಗನ್ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಎಕ್ಸ್ಪ್ರೆಸ್ ವೇನಲ್ಲಿ ಸಂಭವನೀಯ ಅಪಘಾತಗಳನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಈಗಾಗಲೇ ಹೆದ್ದಾರಿಯಲ್ಲಿ ಪ್ರತಿ ಗಂಟೆಗೆ ಕನಿಷ್ಠ 80 ಕಿ.ಮೀ ನಿಂದ ಗರಿಷ್ಠ 100 ಕಿ.ಮೀ ವೇಗದ ಮಿತಿ ವಿಧಿಸಲಾಗಿದ್ದು, ಆ ಬಗ್ಗೆ ಫಲಕಗಳನ್ನು ಹಾಕಲಾಗಿದೆ.
120 ಕಿ.ಮೀ ವೇಗದಲ್ಲಿ ವಾಹನಗಳು ಚಲಿಸುವುದರಿಂದ ಅಪಘಾತಗಳು ನಡೆಯುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಗಂಟೆಗೆ 100 ಕಿ.ಮೀ ವೇಗವನ್ನು ಮಿತಿಗೊಳಿಸಲಾಗಿದ್ದು ಶಿಸ್ತಾಗಿ ಪಾಲಿಸಲು, ಹೆದ್ದಾರಿಯಲ್ಲಿ ಸ್ಪೀಡ್ ರೇಡಾರ್ ಗನ್ ಮತ್ತು ವಾಹನದ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ.
100 ಕಿ.ಮೀ.ಗಿಂತಲೂ ಅಧಿಕ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ನಿನ್ನೆ ರಾಮನಗರ ಪೊಲೀಸರು 44 ಪ್ರಕರಣಗಳನ್ನು ದಾಖಲಿಸಿದ್ದರು. ಇನ್ನು ಎಕ್ಸ್ ಪ್ರೆಸ್ ವೇನಲ್ಲಿ ವೇಗದ ಮಿತಿ ಹಾಕಿರುವುದಕ್ಕೆ ಸಂಚಾರಿ ಪೊಲೀಸರ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…