BREAKING NEWS

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಲಿಮಿಟ್: ಮೀರಿದರೆ ದುಬಾರಿ ದಂಡ ಕಟ್ಟಬೇಕು!

ರಾಮನಗರ: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್‌ ರೇಡಾರ್‌ ಗನ್‌ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಎಕ್ಸ್‌ಪ್ರೆಸ್ ವೇನಲ್ಲಿ ಸಂಭವನೀಯ ಅಪಘಾತಗಳನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಟ್ರಾಫಿಕ್‌ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಈಗಾಗಲೇ ಹೆದ್ದಾರಿಯಲ್ಲಿ ಪ್ರತಿ ಗಂಟೆಗೆ ಕನಿಷ್ಠ 80 ಕಿ.ಮೀ ನಿಂದ ಗರಿಷ್ಠ 100 ಕಿ‌.ಮೀ ವೇಗದ ಮಿತಿ ವಿಧಿಸಲಾಗಿದ್ದು, ಆ ಬಗ್ಗೆ ಫಲಕಗಳನ್ನು ಹಾಕಲಾಗಿದೆ.

120 ಕಿ.ಮೀ ವೇಗದಲ್ಲಿ ವಾಹನಗಳು ಚಲಿಸುವುದರಿಂದ ಅಪಘಾತಗಳು ನಡೆಯುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಗಂಟೆಗೆ 100 ಕಿ.ಮೀ ವೇಗವನ್ನು ಮಿತಿಗೊಳಿಸಲಾಗಿದ್ದು ಶಿಸ್ತಾಗಿ ಪಾಲಿಸಲು, ಹೆದ್ದಾರಿಯಲ್ಲಿ ಸ್ಪೀಡ್ ರೇಡಾರ್ ಗನ್ ಮತ್ತು ವಾಹನದ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ.

100 ಕಿ.ಮೀ.ಗಿಂತಲೂ ಅಧಿಕ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ನಿನ್ನೆ ರಾಮನಗರ ಪೊಲೀಸರು 44 ಪ್ರಕರಣಗಳನ್ನು ದಾಖಲಿಸಿದ್ದರು. ಇನ್ನು ಎಕ್ಸ್ ಪ್ರೆಸ್ ವೇನಲ್ಲಿ ವೇಗದ ಮಿತಿ ಹಾಕಿರುವುದಕ್ಕೆ ಸಂಚಾರಿ ಪೊಲೀಸರ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.

andolanait

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

7 mins ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

16 hours ago