ರಾಮನಗರ: ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್ ರೇಡಾರ್ ಗನ್ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಎಕ್ಸ್ಪ್ರೆಸ್ ವೇನಲ್ಲಿ ಸಂಭವನೀಯ ಅಪಘಾತಗಳನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಈಗಾಗಲೇ ಹೆದ್ದಾರಿಯಲ್ಲಿ ಪ್ರತಿ ಗಂಟೆಗೆ ಕನಿಷ್ಠ 80 ಕಿ.ಮೀ ನಿಂದ ಗರಿಷ್ಠ 100 ಕಿ.ಮೀ ವೇಗದ ಮಿತಿ ವಿಧಿಸಲಾಗಿದ್ದು, ಆ ಬಗ್ಗೆ ಫಲಕಗಳನ್ನು ಹಾಕಲಾಗಿದೆ.
120 ಕಿ.ಮೀ ವೇಗದಲ್ಲಿ ವಾಹನಗಳು ಚಲಿಸುವುದರಿಂದ ಅಪಘಾತಗಳು ನಡೆಯುವ ಸಾಧ್ಯತೆ ಹೆಚ್ಚಿರುತ್ತದೆ. ಇದನ್ನು ತಡೆಯಲು ಗಂಟೆಗೆ 100 ಕಿ.ಮೀ ವೇಗವನ್ನು ಮಿತಿಗೊಳಿಸಲಾಗಿದ್ದು ಶಿಸ್ತಾಗಿ ಪಾಲಿಸಲು, ಹೆದ್ದಾರಿಯಲ್ಲಿ ಸ್ಪೀಡ್ ರೇಡಾರ್ ಗನ್ ಮತ್ತು ವಾಹನದ ನಂಬರ್ ಪ್ಲೇಟ್ ರೆಕಗ್ನಿಷನ್ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ.
100 ಕಿ.ಮೀ.ಗಿಂತಲೂ ಅಧಿಕ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ನಿನ್ನೆ ರಾಮನಗರ ಪೊಲೀಸರು 44 ಪ್ರಕರಣಗಳನ್ನು ದಾಖಲಿಸಿದ್ದರು. ಇನ್ನು ಎಕ್ಸ್ ಪ್ರೆಸ್ ವೇನಲ್ಲಿ ವೇಗದ ಮಿತಿ ಹಾಕಿರುವುದಕ್ಕೆ ಸಂಚಾರಿ ಪೊಲೀಸರ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…