ಚಿಕ್ಕಬಳ್ಳಾಪುರ : ಅಕ್ರಮವಾಗಿ ರಾಶಿರಾಶಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ನಗರದ ಐಬಿ ವೃತ್ತದಲ್ಲಿ ಆಂಧ್ರಪ್ರದೇಶದ ಹಿಂದೂಪುರ ಕಡೆಯಿಂದ ಗೌರಿಬಿದನೂರು-ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿನ ಶಿವಾಜಿನಗರಕ್ಕೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅತಿ ವೇಗದಿಂದ ಕಾರು ತಡೆದಾಗ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕಾರು ತಡೆ ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾರಿನ ಗಾಜು ಪುಡಿಪುಡಿ ಮಾಡಿ ಕಾರಿನಲ್ಲಿದ್ದ ರಾಶಿ ರಾಶಿ ಮಾಂಸವನ್ನು ರಸ್ತೆಗೆ ಸುರಿದು ಆಕ್ರೋಶ ಹೊರಹಾಕಿದ್ದಾರೆ.
ಇದೇ ವೇಳೆ 4 ಬೊಲೆರೋ ಪಿಕ್ಅಪ್ ಹಾಗೂ 1 ಮಿನಿ ಟೆಂಪೋ ಮೂಲಕ ಲೋಡ್ಗಟ್ಟಲೆ ಗೋಮಾಂಸ ಸಾಗಾಟ ಮಾಡುತ್ತಿದ್ದು, ಆ ವಾಹನಗಳಿಗೆ ಮುಂದೆ ಎಸ್ಕಾರ್ಟ್ ವಾಹನವಾಗಿ ಕಾರು ಆಗಮಿಸುತ್ತಿತ್ತು ಎಂದು ತಿಳಿದುಬಂದಿದೆ. ಈ 5 ವಾಹನಗಳನ್ನು ತಡೆದ ಶ್ರೀರಾಮ ಸೇನೆ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದವರ ಚಳಿ ಬಿಡಿಸಿದ ಬಳಿಕ ಅವರ ತಲೆಯ ಮೇಲೆ ಗೋವಿನ ಕಡಿದ ತಲೆ ಹೊರಿಸಿ ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿಸಿದ್ದಾರೆ. ಘೋಷಣೆ ಕೂಗದೆ ಇದ್ದಾಗ, ತಲೆಯ ಮೇಲೆ ಗೋವು ಹೊರಲು ಹಿಂದೇಟು ಹಾಕಿದವರಿಗೆ ಕೋಲಿನಿಂದ ಬಾರಿಸಲಾಗಿದೆ. ಇದಾದ ನಂತರ ಕಾರಿಗೆ ಬೆಂಕಿ ಹಚ್ಚಲಾಗಿದೆ.
ವಿಷಯ ತಿಳಿದ ದೊಡ್ಡಬಳ್ಳಾಪುರ ನಗರ ಪೊಲೀಸರು ಡಿವೈಎಸ್ ಪಿ ರವಿ ಘಟನಾ ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತವಾರಣವಿದ್ದು, ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.
ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…