ಚಿಕ್ಕಬಳ್ಳಾಪುರ : ಅಕ್ರಮವಾಗಿ ರಾಶಿರಾಶಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ನಗರದ ಐಬಿ ವೃತ್ತದಲ್ಲಿ ಆಂಧ್ರಪ್ರದೇಶದ ಹಿಂದೂಪುರ ಕಡೆಯಿಂದ ಗೌರಿಬಿದನೂರು-ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿನ ಶಿವಾಜಿನಗರಕ್ಕೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅತಿ ವೇಗದಿಂದ ಕಾರು ತಡೆದಾಗ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕಾರು ತಡೆ ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾರಿನ ಗಾಜು ಪುಡಿಪುಡಿ ಮಾಡಿ ಕಾರಿನಲ್ಲಿದ್ದ ರಾಶಿ ರಾಶಿ ಮಾಂಸವನ್ನು ರಸ್ತೆಗೆ ಸುರಿದು ಆಕ್ರೋಶ ಹೊರಹಾಕಿದ್ದಾರೆ.
ಇದೇ ವೇಳೆ 4 ಬೊಲೆರೋ ಪಿಕ್ಅಪ್ ಹಾಗೂ 1 ಮಿನಿ ಟೆಂಪೋ ಮೂಲಕ ಲೋಡ್ಗಟ್ಟಲೆ ಗೋಮಾಂಸ ಸಾಗಾಟ ಮಾಡುತ್ತಿದ್ದು, ಆ ವಾಹನಗಳಿಗೆ ಮುಂದೆ ಎಸ್ಕಾರ್ಟ್ ವಾಹನವಾಗಿ ಕಾರು ಆಗಮಿಸುತ್ತಿತ್ತು ಎಂದು ತಿಳಿದುಬಂದಿದೆ. ಈ 5 ವಾಹನಗಳನ್ನು ತಡೆದ ಶ್ರೀರಾಮ ಸೇನೆ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದವರ ಚಳಿ ಬಿಡಿಸಿದ ಬಳಿಕ ಅವರ ತಲೆಯ ಮೇಲೆ ಗೋವಿನ ಕಡಿದ ತಲೆ ಹೊರಿಸಿ ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿಸಿದ್ದಾರೆ. ಘೋಷಣೆ ಕೂಗದೆ ಇದ್ದಾಗ, ತಲೆಯ ಮೇಲೆ ಗೋವು ಹೊರಲು ಹಿಂದೇಟು ಹಾಕಿದವರಿಗೆ ಕೋಲಿನಿಂದ ಬಾರಿಸಲಾಗಿದೆ. ಇದಾದ ನಂತರ ಕಾರಿಗೆ ಬೆಂಕಿ ಹಚ್ಚಲಾಗಿದೆ.
ವಿಷಯ ತಿಳಿದ ದೊಡ್ಡಬಳ್ಳಾಪುರ ನಗರ ಪೊಲೀಸರು ಡಿವೈಎಸ್ ಪಿ ರವಿ ಘಟನಾ ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತವಾರಣವಿದ್ದು, ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…
ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್…
ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಟಾಟಾ ಏರ್ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…