BREAKING NEWS

ಗೋಮಾಂಸ ಸಾಗಿಸುತ್ತಿದ್ದ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ ಕಾರ್ಯಕರತರು

ಚಿಕ್ಕಬಳ್ಳಾಪುರ : ಅಕ್ರಮವಾಗಿ ರಾಶಿರಾಶಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ನಗರದ ಐಬಿ ವೃತ್ತದಲ್ಲಿ ಆಂಧ್ರಪ್ರದೇಶದ ಹಿಂದೂಪುರ ಕಡೆಯಿಂದ ಗೌರಿಬಿದನೂರು-ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿನ ಶಿವಾಜಿನಗರಕ್ಕೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅತಿ ವೇಗದಿಂದ ಕಾರು ತಡೆದಾಗ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕಾರು ತಡೆ ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾರಿನ ಗಾಜು ಪುಡಿಪುಡಿ ಮಾಡಿ ಕಾರಿನಲ್ಲಿದ್ದ ರಾಶಿ ರಾಶಿ ಮಾಂಸವನ್ನು ರಸ್ತೆಗೆ ಸುರಿದು ಆಕ್ರೋಶ ಹೊರಹಾಕಿದ್ದಾರೆ.

ಇದೇ ವೇಳೆ 4 ಬೊಲೆರೋ ಪಿಕ್‌ಅಪ್ ಹಾಗೂ 1 ಮಿನಿ ಟೆಂಪೋ ಮೂಲಕ ಲೋಡ್‌ಗಟ್ಟಲೆ ಗೋಮಾಂಸ ಸಾಗಾಟ ಮಾಡುತ್ತಿದ್ದು, ಆ ವಾಹನಗಳಿಗೆ ಮುಂದೆ ಎಸ್ಕಾರ್ಟ್ ವಾಹನವಾಗಿ ಕಾರು ಆಗಮಿಸುತ್ತಿತ್ತು ಎಂದು ತಿಳಿದುಬಂದಿದೆ. ಈ 5 ವಾಹನಗಳನ್ನು ತಡೆದ ಶ್ರೀರಾಮ ಸೇನೆ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದವರ ಚಳಿ ಬಿಡಿಸಿದ ಬಳಿಕ ಅವರ ತಲೆಯ ಮೇಲೆ ಗೋವಿನ ಕಡಿದ ತಲೆ ಹೊರಿಸಿ ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿಸಿದ್ದಾರೆ. ಘೋಷಣೆ ಕೂಗದೆ ಇದ್ದಾಗ, ತಲೆಯ ಮೇಲೆ ಗೋವು ಹೊರಲು ಹಿಂದೇಟು ಹಾಕಿದವರಿಗೆ ಕೋಲಿನಿಂದ ಬಾರಿಸಲಾಗಿದೆ. ಇದಾದ ನಂತರ ಕಾರಿಗೆ ಬೆಂಕಿ ಹಚ್ಚಲಾಗಿದೆ.

ವಿಷಯ ತಿಳಿದ ದೊಡ್ಡಬಳ್ಳಾಪುರ ನಗರ ಪೊಲೀಸರು ಡಿವೈಎಸ್ ಪಿ ರವಿ ಘಟನಾ ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತವಾರಣವಿದ್ದು, ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.

lokesh

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

9 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

9 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

10 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

10 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

14 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

15 hours ago