ಚಿಕ್ಕಬಳ್ಳಾಪುರ : ಅಕ್ರಮವಾಗಿ ರಾಶಿರಾಶಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ನಗರದ ಐಬಿ ವೃತ್ತದಲ್ಲಿ ಆಂಧ್ರಪ್ರದೇಶದ ಹಿಂದೂಪುರ ಕಡೆಯಿಂದ ಗೌರಿಬಿದನೂರು-ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿನ ಶಿವಾಜಿನಗರಕ್ಕೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅತಿ ವೇಗದಿಂದ ಕಾರು ತಡೆದಾಗ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕಾರು ತಡೆ ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾರಿನ ಗಾಜು ಪುಡಿಪುಡಿ ಮಾಡಿ ಕಾರಿನಲ್ಲಿದ್ದ ರಾಶಿ ರಾಶಿ ಮಾಂಸವನ್ನು ರಸ್ತೆಗೆ ಸುರಿದು ಆಕ್ರೋಶ ಹೊರಹಾಕಿದ್ದಾರೆ.
ಇದೇ ವೇಳೆ 4 ಬೊಲೆರೋ ಪಿಕ್ಅಪ್ ಹಾಗೂ 1 ಮಿನಿ ಟೆಂಪೋ ಮೂಲಕ ಲೋಡ್ಗಟ್ಟಲೆ ಗೋಮಾಂಸ ಸಾಗಾಟ ಮಾಡುತ್ತಿದ್ದು, ಆ ವಾಹನಗಳಿಗೆ ಮುಂದೆ ಎಸ್ಕಾರ್ಟ್ ವಾಹನವಾಗಿ ಕಾರು ಆಗಮಿಸುತ್ತಿತ್ತು ಎಂದು ತಿಳಿದುಬಂದಿದೆ. ಈ 5 ವಾಹನಗಳನ್ನು ತಡೆದ ಶ್ರೀರಾಮ ಸೇನೆ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದವರ ಚಳಿ ಬಿಡಿಸಿದ ಬಳಿಕ ಅವರ ತಲೆಯ ಮೇಲೆ ಗೋವಿನ ಕಡಿದ ತಲೆ ಹೊರಿಸಿ ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿಸಿದ್ದಾರೆ. ಘೋಷಣೆ ಕೂಗದೆ ಇದ್ದಾಗ, ತಲೆಯ ಮೇಲೆ ಗೋವು ಹೊರಲು ಹಿಂದೇಟು ಹಾಕಿದವರಿಗೆ ಕೋಲಿನಿಂದ ಬಾರಿಸಲಾಗಿದೆ. ಇದಾದ ನಂತರ ಕಾರಿಗೆ ಬೆಂಕಿ ಹಚ್ಚಲಾಗಿದೆ.
ವಿಷಯ ತಿಳಿದ ದೊಡ್ಡಬಳ್ಳಾಪುರ ನಗರ ಪೊಲೀಸರು ಡಿವೈಎಸ್ ಪಿ ರವಿ ಘಟನಾ ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತವಾರಣವಿದ್ದು, ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…