BREAKING NEWS

ಗೋಮಾಂಸ ಸಾಗಿಸುತ್ತಿದ್ದ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ ಕಾರ್ಯಕರತರು

ಚಿಕ್ಕಬಳ್ಳಾಪುರ : ಅಕ್ರಮವಾಗಿ ರಾಶಿರಾಶಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ನಗರದ ಐಬಿ ವೃತ್ತದಲ್ಲಿ ಆಂಧ್ರಪ್ರದೇಶದ ಹಿಂದೂಪುರ ಕಡೆಯಿಂದ ಗೌರಿಬಿದನೂರು-ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿನ ಶಿವಾಜಿನಗರಕ್ಕೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅತಿ ವೇಗದಿಂದ ಕಾರು ತಡೆದಾಗ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕಾರು ತಡೆ ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾರಿನ ಗಾಜು ಪುಡಿಪುಡಿ ಮಾಡಿ ಕಾರಿನಲ್ಲಿದ್ದ ರಾಶಿ ರಾಶಿ ಮಾಂಸವನ್ನು ರಸ್ತೆಗೆ ಸುರಿದು ಆಕ್ರೋಶ ಹೊರಹಾಕಿದ್ದಾರೆ.

ಇದೇ ವೇಳೆ 4 ಬೊಲೆರೋ ಪಿಕ್‌ಅಪ್ ಹಾಗೂ 1 ಮಿನಿ ಟೆಂಪೋ ಮೂಲಕ ಲೋಡ್‌ಗಟ್ಟಲೆ ಗೋಮಾಂಸ ಸಾಗಾಟ ಮಾಡುತ್ತಿದ್ದು, ಆ ವಾಹನಗಳಿಗೆ ಮುಂದೆ ಎಸ್ಕಾರ್ಟ್ ವಾಹನವಾಗಿ ಕಾರು ಆಗಮಿಸುತ್ತಿತ್ತು ಎಂದು ತಿಳಿದುಬಂದಿದೆ. ಈ 5 ವಾಹನಗಳನ್ನು ತಡೆದ ಶ್ರೀರಾಮ ಸೇನೆ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದವರ ಚಳಿ ಬಿಡಿಸಿದ ಬಳಿಕ ಅವರ ತಲೆಯ ಮೇಲೆ ಗೋವಿನ ಕಡಿದ ತಲೆ ಹೊರಿಸಿ ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿಸಿದ್ದಾರೆ. ಘೋಷಣೆ ಕೂಗದೆ ಇದ್ದಾಗ, ತಲೆಯ ಮೇಲೆ ಗೋವು ಹೊರಲು ಹಿಂದೇಟು ಹಾಕಿದವರಿಗೆ ಕೋಲಿನಿಂದ ಬಾರಿಸಲಾಗಿದೆ. ಇದಾದ ನಂತರ ಕಾರಿಗೆ ಬೆಂಕಿ ಹಚ್ಚಲಾಗಿದೆ.

ವಿಷಯ ತಿಳಿದ ದೊಡ್ಡಬಳ್ಳಾಪುರ ನಗರ ಪೊಲೀಸರು ಡಿವೈಎಸ್ ಪಿ ರವಿ ಘಟನಾ ಸ್ಥಳಕ್ಕೆ ಆಗಮಿಸಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತವಾರಣವಿದ್ದು, ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.

lokesh

Recent Posts

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

1 hour ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

2 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

6 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

6 hours ago

ಓದುಗರ ಪತ್ರ: ಮೇಲ್ಮನೆಯ ಗಾಂಭೀರ್ಯ ಹೆಚ್ಚಿಸುವಂತೆ ಕಾರ್ಯನಿರ್ವವಹಿಸಲಿ

ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…

10 hours ago

ಓದುಗರ ಪತ್ರ: ದೇವಿಯ ನೇರ ದರ್ಶನ ಭಾಗ್ಯ ಕಲ್ಪಿಸಿ

ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…

10 hours ago