BREAKING NEWS

ಅಯೋಧ್ಯೆಗೆ ಶ್ರೀರಾಮ ಆಗಮಿಸಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

ಅಯೋಧ್ಯೆ : ಇಂದು ಅಯೋಧ್ಯೆಗೆ ನಮ್ಮೆಲ್ಲರ ರಾಮ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ಈ ಶುಭ ಘಳಿಗೆಯಲ್ಲಿ ಎಲ್ಲರಿಗೂ ಶುಭಾಶಯ ಎಂದು ಪ್ರಧಾನಿ ನರೇಂದ್ರ ಮೋದಿ ಸಮತಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮದ ನಂತರ ದೇವಾಲಯದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.

ಹೇಳಲು ಎಷ್ಟೊಂದು ವಿಷಯಗಳು ಇವೆ. ಆದ್ರೆ ಮಾತುಗಳು ಹೊರಳದೇ ಗಂಟಲು ಕಟ್ಟುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್ ನಲ್ಲಿ ಇರಲ್ಲ . ನಮ್ಮ ರಾಮಲಲ್ಲ ದಿವ್ಯ ಮಂದಿರದಲ್ಲಿ ಇರುತ್ತಾನೆ . ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ ರಾಷ್ಟ್ರ ಎದ್ದು ನಿಂತ ಕ್ಷಣವಿದು ಎಂದಿದ್ದಾರೆ.

ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ. ದೇಶದಲ್ಲಿ ಇಂದು ಪ್ರತಿದಿನವೂ ಒಂದು ವಿಶ್ವಾಸ ಮೂಡುತ್ತಿದೆ. ಈ ಕ್ಷಣ ದೈವಿಕ ಅನುಭವವನ್ನು ಪಡೆಯುತ್ತಿದ್ದೇನೆ. ಪ್ರಭು ಶ್ರೀರಾಮನ ಬಳಿ ನಾನು ಕ್ಷಮೆಯಾಚಿಸುತ್ತೇನೆ. ಇಷ್ಟು ವರ್ಷಗಳ ಕಾಲ ನಾವು ಸಮಯ ತೆಗೆದುಕೊಂಡಿದ್ದಕ್ಕೆ ಕ್ಷಮೆಯಾಚಿಸುವೆ. ಪ್ರಭು ಶ್ರೀರಾಮನ ಆಗಮನದಿಂದ ಇಡೀ ದೇಶ ಸಂಭ್ರಮಗೊಂಡಿದೆ ಎಂದು ಮೋದಿ ಹೇಳಿದ್ದಾರೆ.

https://x.com/ANI/status/1749353477502075092?s=20

andolanait

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

2 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

5 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

6 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

6 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

7 hours ago