ಅಯೋಧ್ಯೆ : ಇಂದು ಅಯೋಧ್ಯೆಗೆ ನಮ್ಮೆಲ್ಲರ ರಾಮ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ಈ ಶುಭ ಘಳಿಗೆಯಲ್ಲಿ ಎಲ್ಲರಿಗೂ ಶುಭಾಶಯ ಎಂದು ಪ್ರಧಾನಿ ನರೇಂದ್ರ ಮೋದಿ ಸಮತಸ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮದ ನಂತರ ದೇವಾಲಯದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು.
ಹೇಳಲು ಎಷ್ಟೊಂದು ವಿಷಯಗಳು ಇವೆ. ಆದ್ರೆ ಮಾತುಗಳು ಹೊರಳದೇ ಗಂಟಲು ಕಟ್ಟುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್ ನಲ್ಲಿ ಇರಲ್ಲ . ನಮ್ಮ ರಾಮಲಲ್ಲ ದಿವ್ಯ ಮಂದಿರದಲ್ಲಿ ಇರುತ್ತಾನೆ . ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ ರಾಷ್ಟ್ರ ಎದ್ದು ನಿಂತ ಕ್ಷಣವಿದು ಎಂದಿದ್ದಾರೆ.
ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ. ದೇಶದಲ್ಲಿ ಇಂದು ಪ್ರತಿದಿನವೂ ಒಂದು ವಿಶ್ವಾಸ ಮೂಡುತ್ತಿದೆ. ಈ ಕ್ಷಣ ದೈವಿಕ ಅನುಭವವನ್ನು ಪಡೆಯುತ್ತಿದ್ದೇನೆ. ಪ್ರಭು ಶ್ರೀರಾಮನ ಬಳಿ ನಾನು ಕ್ಷಮೆಯಾಚಿಸುತ್ತೇನೆ. ಇಷ್ಟು ವರ್ಷಗಳ ಕಾಲ ನಾವು ಸಮಯ ತೆಗೆದುಕೊಂಡಿದ್ದಕ್ಕೆ ಕ್ಷಮೆಯಾಚಿಸುವೆ. ಪ್ರಭು ಶ್ರೀರಾಮನ ಆಗಮನದಿಂದ ಇಡೀ ದೇಶ ಸಂಭ್ರಮಗೊಂಡಿದೆ ಎಂದು ಮೋದಿ ಹೇಳಿದ್ದಾರೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…