BREAKING NEWS

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ‌ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಡಿಸೆಂಬರ್‌ 15 ರ ಒಳಗೆ ವೇಳಾಪಟ್ಟಿಯ ಕುರಿತು ಆಕ್ಷೇಪಣೆ ವ್ಯಕ್ತಪಡಿಸಲು ಅವಕಾಶ ಕಲ್ಪಿಸಿದೆ.

ಇನ್ನು ಮಾರ್ಚ್‌ 2 ರಿಂದ ಮಾರ್ಚ್‌ 22 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್‌ 25 ರಿಂದ ಏಪ್ರಿಲ್‌ 06 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ.

ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾ ಪಟ್ಟಿ

ಮಾರ್ಚ್‌ 02 – ಕನ್ನಡ, ಅರೇಬಿಕ್‌

ಮಾರ್ಚ್‌ 04 – ಇತಿಹಾಸ, ಭೌತಶಾಸ್ತ್ರ

ಮಾರ್ಚ್‌ 05 – ಮಾಹಿತಿ ತಂತ್ರಜ್ಞಾನ, ರೀಟೈಲ್‌, ಹೆಲ್ತ್‌ ಕೇರ್‌

ಮಾರ್ಚ್‌ 06 – ಸಮಾಜ ಶಾಸ್ತ್ರ, ವಿದ್ಯುನ್ಮಾನ ಗಣಕ ಶಾಸ್ತ್ರ, ವಿಜ್ಞಾನ

ಮಾರ್ಚ್‌ 07 – ಹಿಂದಿ

ಮಾರ್ಚ್‌ 09 – ರಾಜ್ಯಶಾಸ್ತ್ರ , ಸಂಖ್ಯಾಶಾಸ್ತ್ರ

ಮಾರ್ಚ್‌ 11 – ಇಂಗ್ಲಿಷ್‌

ಮಾರ್ಚ್‌ 12 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌

ಮಾರ್ಚ್‌ 13 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ,

ಮಾರ್ಚ್‌ 14 – ಗಣಿತ, ಶಿಕ್ಷಣ ಶಾಸ್ತ್ರ

ಮಾರ್ಚ್‌ 16 – ಭೂಗೋಳ ಶಾಸ್ತ್ರ, ಜೀವ ಶಾಸ್ತ್ರ

ಮಾರ್ಚ್‌ 18 – ರಸಾಯನಶಾಸ್ತ್ರ, ಮನಃಶಾಸ್ತ್ರ ಮೂಲ ಗಣಿತ, ಹಿಂದೂಸ್ಥಾನಿ ಸಂಗೀತ

ಮಾರ್ಚ್‌ 20 – ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್‌ 22 – ಅರ್ಥಶಾಸ್ತ್ರ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾ ಪಟ್ಟಿ

ಮಾರ್ಚ್‌ 25 – ಪ್ರಥಮ ಭಾಷೆ (ಕನ್ನಡ)

ಮಾರ್ಚ್‌ 27 – ಸಮಾಜ ವಿಜ್ಞಾನ

ಮಾರ್ಚ್‌ 30 – ವಿಜ್ಞಾನ

ಏಪ್ರಿಲ್‌ 02 – ಗಣಿತ

ಏಪ್ರಿಲ್‌ 04 – ತೃತೀಯ ಭಾಷೆ (ಹಿಂದಿ)

ಏಪ್ರಿಲ್‌ 06 – ದ್ವಿತೀಯ ಭಾಷೆ (ಇಂಗ್ಲಿಷ್)

lokesh

Recent Posts

ವಿನಾಶಕಾರಿ ಪ್ರವಾಹ: ನೇಪಾಳದಲ್ಲಿ ಏರುತ್ತಲೇ ಇದೆ ಸಾವಿನ ಸಂಖ್ಯೆ

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹಕ್ಕೆ ಸಾವಿನ ಸಂಖ್ಯೆ 682ಕ್ಕೆ ಏರಿಕೆಯಾಗಿದೆ. 2400ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದು, ಇದುವರೆಗೂ 4400ಕ್ಕೂ…

4 mins ago

ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ ಸಂಪೂರ್ಣವಾಗಿ ಮುಕ್ತರಾಗಬೇಕು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಪ್ರಗತಿ ಸಾಧಿಸಿ 'ವಿಕಸಿತ ಭಾರತ'ವಾಗಿ ರೂಪುಗೊಳ್ಳಬೇಕಾದರೆ, ಯುವ ಜನತೆ ಮಾದಕ ವಸ್ತುಗಳ ಪಿಡುಗಿನಿಂದ…

9 mins ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಇಂದು ಸಂಜೆಯಿಂದಲೇ ಆನೆಗಳಿಗೆ ತಾಲೀಮು ಆರಂಭ: ಡಿಸಿಎಫ್‌ ಡಾ.ಪ್ರಭುಗೌಡ

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…

2 hours ago

ಮೈಸೂರು ದಸರಾ ಗಜಪಡೆ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಶ್ರೀಕಂಠನಿಗೆ ಮೊದಲ ಸ್ಥಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…

2 hours ago

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

5 hours ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

5 hours ago