ಬೆಂಗಳೂರು : ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್ಎಸ್ಎಲ್ಸಿ 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್ಎಸ್ಎಲ್ಸಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ.
ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.
ಬೆಂಗಳೂರಿನ ನ್ಯೂ ಮೆಕಾಲೆ ಶಾಲೆಯ ಭೂಮಿಕಾ ಪೈ, ಚಿಕ್ಕಬಳ್ಳಾಪುರ ಜಿಲ್ಲೆಯ ಅಗಲಗುರ್ಕಿಯ ಬಿಜಿಎಸ್ ಶಾಲೆಯ ಯಶಸ್ಗೌಡ, ಸವದತ್ತಿಯ ಶ್ರೀಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ, ವಿಜಯಪುರದ ನಾಗರಬೆಟ್ಟದ ಆಕ್ಸ್ಫರ್ಡ್ ಆಂಗ್ಲ ಶಾಲೆಯ ಭೀಮನಗೌಡ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಜಿಲ್ಲಾವಾರು ಫಲಿತಾಂಶ
ಚಿತ್ರದುರ್ಗ -ಶೇ.96.8
ಮಂಡ್ಯ-ಶೇ.96.74
ಹಾಸನ-ಶೇ.96.68
ಬೆಂಗಳೂರು ಗ್ರಾಮಾಂತರ-ಶೇ.96.48
ಚಿಕ್ಕಬಳ್ಳಾಪುರ-ಶೇ.96.15
ಕೋಲಾರ-ಶೇ.94.6
ಚಾಮರಾಜನಗರ -ಶೇ.,94.32
ಮಧುಗಿರಿ- ಶೇ.93.23
ಕೊಡಗು-ಶೇ.93.19
ವಿಜಯನಗರ- ಶೇ.91.41
ವಿಜಯಪುರ- ಶೇ. 91.23
ಚಿಕ್ಕೋಡಿ-91.07
ಉತ್ತರಕನ್ನಡ- ಶೇ.90.53
ದಾವಣಗೆರೆ- ಶೇ.90.43
ಕೊಪ್ಪಳ- ಶೇ.90.27
ಮೈಸೂರು ಜಿಲ್ಲೆ- ಶೇ.89.75
ಚಿಕ್ಕಮಗಳೂರು-ಶೇ.89.69
ಉಡುಪಿ- ಶೇ. 89.49
ದಕ್ಷಿಣ ಕನ್ನಡ- ಶೇ. 89.47
ತುಮಕೂರು- ಶೇ. 89.43
ರಾಮನಗರ- ಶೇ. 89.42
ಹಾವೇರಿ ಶೇ.89.11
ಶಿರಸಿ- ಶೇ.87.39
ಧಾರವಾಡ-ಶೇ.86.55
ಗದಗ-ಶೇ.86.51
ಬೆಳಗಾವಿ-ಶೇ.85.85
ಬಾಗಲಕೋಟೆ-ಶೇ.85.14
ಕಲಬುರಗಿ- ಶೇ.84.51
ಶಿವಮೊಗ್ಗ-ಶೇ.84.04
ರಾಯಚೂರು- ಶೇ. 84.02
ಬಳ್ಳಾರಿ- ಶೇ.81.54
ಬೆಂಗಳೂರು ಉತ್ತರ ಶೇ.80.93
ಬೆಂಗಳೂರು ದಕ್ಷಿಣ ಶೇ.78.95
ಬೆಂಗಳೂರು ಪಶ್ಚಿಮ ಶೇ.80.93
ಬೀದರ್ ಶೇ. 78.73
ಯಾದಗಿರಿಗೆ ಕೊನೆಯ ಸ್ಥಾನ- ಶೇ.75.49
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…