BREAKING NEWS

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ : 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳೆಷ್ಟು ?

ಬೆಂಗಳೂರು : ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್​ಎಸ್​ಎಲ್​ಸಿ 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ.

ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.

ಬೆಂಗಳೂರಿನ ನ್ಯೂ ಮೆಕಾಲೆ ಶಾಲೆಯ ಭೂಮಿಕಾ ಪೈ, ಚಿಕ್ಕಬಳ್ಳಾಪುರ ಜಿಲ್ಲೆಯ ಅಗಲಗುರ್ಕಿಯ  ಬಿಜಿಎಸ್ ಶಾಲೆಯ ಯಶಸ್​​ಗೌಡ,  ಸವದತ್ತಿಯ ಶ್ರೀಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ, ವಿಜಯಪುರದ ನಾಗರಬೆಟ್ಟದ ಆಕ್ಸ್​ಫರ್ಡ್​ ಆಂಗ್ಲ ಶಾಲೆಯ ಭೀಮನಗೌಡ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

 

ಜಿಲ್ಲಾವಾರು ಫಲಿತಾಂಶ

ಚಿತ್ರದುರ್ಗ -ಶೇ.96.8

ಮಂಡ್ಯ-ಶೇ.96.74

ಹಾಸನ-ಶೇ.96.68

ಬೆಂಗಳೂರು ಗ್ರಾಮಾಂತರ-ಶೇ.96.48

ಚಿಕ್ಕಬಳ್ಳಾಪುರ-ಶೇ.96.15

ಕೋಲಾರ-ಶೇ.94.6

ಚಾಮರಾಜನಗರ -ಶೇ.,94.32

ಮಧುಗಿರಿ- ಶೇ.93.23

ಕೊಡಗು-ಶೇ.93.19

ವಿಜಯನಗರ- ಶೇ.91.41

ವಿಜಯಪುರ- ಶೇ. 91.23

ಚಿಕ್ಕೋಡಿ-91.07

ಉತ್ತರಕನ್ನಡ- ಶೇ.90.53

ದಾವಣಗೆರೆ- ಶೇ.90.43

ಕೊಪ್ಪಳ- ಶೇ.90.27

ಮೈಸೂರು ಜಿಲ್ಲೆ- ಶೇ.89.75

ಚಿಕ್ಕಮಗಳೂರು-ಶೇ.89.69

ಉಡುಪಿ- ಶೇ. 89.49

ದಕ್ಷಿಣ ಕನ್ನಡ- ಶೇ. 89.47

ತುಮಕೂರು- ಶೇ. 89.43

ರಾಮನಗರ- ಶೇ. 89.42

ಹಾವೇರಿ ಶೇ.89.11

ಶಿರಸಿ- ಶೇ.87.39

ಧಾರವಾಡ-ಶೇ.86.55

ಗದಗ-ಶೇ.86.51

ಬೆಳಗಾವಿ-ಶೇ.85.85

ಬಾಗಲಕೋಟೆ-ಶೇ.85.14

ಕಲಬುರಗಿ- ಶೇ.84.51

ಶಿವಮೊಗ್ಗ-ಶೇ.84.04

ರಾಯಚೂರು- ಶೇ. 84.02

ಬಳ್ಳಾರಿ- ಶೇ.81.54

ಬೆಂಗಳೂರು ಉತ್ತರ ಶೇ.80.93

ಬೆಂಗಳೂರು ದಕ್ಷಿಣ ಶೇ.78.95

ಬೆಂಗಳೂರು ಪಶ್ಚಿಮ ಶೇ.80.93

ಬೀದರ್ ಶೇ. 78.73

ಯಾದಗಿರಿಗೆ ಕೊನೆಯ ಸ್ಥಾನ- ಶೇ.75.49

lokesh

Recent Posts

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

22 mins ago

ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…

26 mins ago

ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…

29 mins ago

ಹುಲಿ ದಾಳಿ; ಹಸು ಸಾವು

ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…

32 mins ago

ಮೈಸೂರು | ಜಿಲ್ಲೆಯಲ್ಲಿ ಅಪೌಷ್ಠಿಕ‌ ಮಕ್ಕಳ ಸಂಖ್ಯೆ ಗಣನೀಯ ಇಳಿಕೆ

ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…

34 mins ago

ಅಧಿಕಾರ ಕಿತ್ತಾಟ ಬಿಟ್ಟು ಅಭಿವೃದ್ಧಿ ಚರ್ಚೆ ನಡೆಯಲಿ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…

38 mins ago