BREAKING NEWS

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ : 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳೆಷ್ಟು ?

ಬೆಂಗಳೂರು : ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್​ಎಸ್​ಎಲ್​ಸಿ 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ.

ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.

ಬೆಂಗಳೂರಿನ ನ್ಯೂ ಮೆಕಾಲೆ ಶಾಲೆಯ ಭೂಮಿಕಾ ಪೈ, ಚಿಕ್ಕಬಳ್ಳಾಪುರ ಜಿಲ್ಲೆಯ ಅಗಲಗುರ್ಕಿಯ  ಬಿಜಿಎಸ್ ಶಾಲೆಯ ಯಶಸ್​​ಗೌಡ,  ಸವದತ್ತಿಯ ಶ್ರೀಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ, ವಿಜಯಪುರದ ನಾಗರಬೆಟ್ಟದ ಆಕ್ಸ್​ಫರ್ಡ್​ ಆಂಗ್ಲ ಶಾಲೆಯ ಭೀಮನಗೌಡ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

 

ಜಿಲ್ಲಾವಾರು ಫಲಿತಾಂಶ

ಚಿತ್ರದುರ್ಗ -ಶೇ.96.8

ಮಂಡ್ಯ-ಶೇ.96.74

ಹಾಸನ-ಶೇ.96.68

ಬೆಂಗಳೂರು ಗ್ರಾಮಾಂತರ-ಶೇ.96.48

ಚಿಕ್ಕಬಳ್ಳಾಪುರ-ಶೇ.96.15

ಕೋಲಾರ-ಶೇ.94.6

ಚಾಮರಾಜನಗರ -ಶೇ.,94.32

ಮಧುಗಿರಿ- ಶೇ.93.23

ಕೊಡಗು-ಶೇ.93.19

ವಿಜಯನಗರ- ಶೇ.91.41

ವಿಜಯಪುರ- ಶೇ. 91.23

ಚಿಕ್ಕೋಡಿ-91.07

ಉತ್ತರಕನ್ನಡ- ಶೇ.90.53

ದಾವಣಗೆರೆ- ಶೇ.90.43

ಕೊಪ್ಪಳ- ಶೇ.90.27

ಮೈಸೂರು ಜಿಲ್ಲೆ- ಶೇ.89.75

ಚಿಕ್ಕಮಗಳೂರು-ಶೇ.89.69

ಉಡುಪಿ- ಶೇ. 89.49

ದಕ್ಷಿಣ ಕನ್ನಡ- ಶೇ. 89.47

ತುಮಕೂರು- ಶೇ. 89.43

ರಾಮನಗರ- ಶೇ. 89.42

ಹಾವೇರಿ ಶೇ.89.11

ಶಿರಸಿ- ಶೇ.87.39

ಧಾರವಾಡ-ಶೇ.86.55

ಗದಗ-ಶೇ.86.51

ಬೆಳಗಾವಿ-ಶೇ.85.85

ಬಾಗಲಕೋಟೆ-ಶೇ.85.14

ಕಲಬುರಗಿ- ಶೇ.84.51

ಶಿವಮೊಗ್ಗ-ಶೇ.84.04

ರಾಯಚೂರು- ಶೇ. 84.02

ಬಳ್ಳಾರಿ- ಶೇ.81.54

ಬೆಂಗಳೂರು ಉತ್ತರ ಶೇ.80.93

ಬೆಂಗಳೂರು ದಕ್ಷಿಣ ಶೇ.78.95

ಬೆಂಗಳೂರು ಪಶ್ಚಿಮ ಶೇ.80.93

ಬೀದರ್ ಶೇ. 78.73

ಯಾದಗಿರಿಗೆ ಕೊನೆಯ ಸ್ಥಾನ- ಶೇ.75.49

lokesh

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

5 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

5 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

5 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

5 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

5 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

6 hours ago