ಬೆಂಗಳೂರು : ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್ಎಸ್ಎಲ್ಸಿ 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್ಎಸ್ಎಲ್ಸಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ.
ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.
ಬೆಂಗಳೂರಿನ ನ್ಯೂ ಮೆಕಾಲೆ ಶಾಲೆಯ ಭೂಮಿಕಾ ಪೈ, ಚಿಕ್ಕಬಳ್ಳಾಪುರ ಜಿಲ್ಲೆಯ ಅಗಲಗುರ್ಕಿಯ ಬಿಜಿಎಸ್ ಶಾಲೆಯ ಯಶಸ್ಗೌಡ, ಸವದತ್ತಿಯ ಶ್ರೀಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ, ವಿಜಯಪುರದ ನಾಗರಬೆಟ್ಟದ ಆಕ್ಸ್ಫರ್ಡ್ ಆಂಗ್ಲ ಶಾಲೆಯ ಭೀಮನಗೌಡ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಜಿಲ್ಲಾವಾರು ಫಲಿತಾಂಶ
ಚಿತ್ರದುರ್ಗ -ಶೇ.96.8
ಮಂಡ್ಯ-ಶೇ.96.74
ಹಾಸನ-ಶೇ.96.68
ಬೆಂಗಳೂರು ಗ್ರಾಮಾಂತರ-ಶೇ.96.48
ಚಿಕ್ಕಬಳ್ಳಾಪುರ-ಶೇ.96.15
ಕೋಲಾರ-ಶೇ.94.6
ಚಾಮರಾಜನಗರ -ಶೇ.,94.32
ಮಧುಗಿರಿ- ಶೇ.93.23
ಕೊಡಗು-ಶೇ.93.19
ವಿಜಯನಗರ- ಶೇ.91.41
ವಿಜಯಪುರ- ಶೇ. 91.23
ಚಿಕ್ಕೋಡಿ-91.07
ಉತ್ತರಕನ್ನಡ- ಶೇ.90.53
ದಾವಣಗೆರೆ- ಶೇ.90.43
ಕೊಪ್ಪಳ- ಶೇ.90.27
ಮೈಸೂರು ಜಿಲ್ಲೆ- ಶೇ.89.75
ಚಿಕ್ಕಮಗಳೂರು-ಶೇ.89.69
ಉಡುಪಿ- ಶೇ. 89.49
ದಕ್ಷಿಣ ಕನ್ನಡ- ಶೇ. 89.47
ತುಮಕೂರು- ಶೇ. 89.43
ರಾಮನಗರ- ಶೇ. 89.42
ಹಾವೇರಿ ಶೇ.89.11
ಶಿರಸಿ- ಶೇ.87.39
ಧಾರವಾಡ-ಶೇ.86.55
ಗದಗ-ಶೇ.86.51
ಬೆಳಗಾವಿ-ಶೇ.85.85
ಬಾಗಲಕೋಟೆ-ಶೇ.85.14
ಕಲಬುರಗಿ- ಶೇ.84.51
ಶಿವಮೊಗ್ಗ-ಶೇ.84.04
ರಾಯಚೂರು- ಶೇ. 84.02
ಬಳ್ಳಾರಿ- ಶೇ.81.54
ಬೆಂಗಳೂರು ಉತ್ತರ ಶೇ.80.93
ಬೆಂಗಳೂರು ದಕ್ಷಿಣ ಶೇ.78.95
ಬೆಂಗಳೂರು ಪಶ್ಚಿಮ ಶೇ.80.93
ಬೀದರ್ ಶೇ. 78.73
ಯಾದಗಿರಿಗೆ ಕೊನೆಯ ಸ್ಥಾನ- ಶೇ.75.49
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…