BREAKING NEWS

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ : 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳೆಷ್ಟು ?

ಬೆಂಗಳೂರು : ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್​ಎಸ್​ಎಲ್​ಸಿ 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ.

ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.

ಬೆಂಗಳೂರಿನ ನ್ಯೂ ಮೆಕಾಲೆ ಶಾಲೆಯ ಭೂಮಿಕಾ ಪೈ, ಚಿಕ್ಕಬಳ್ಳಾಪುರ ಜಿಲ್ಲೆಯ ಅಗಲಗುರ್ಕಿಯ  ಬಿಜಿಎಸ್ ಶಾಲೆಯ ಯಶಸ್​​ಗೌಡ,  ಸವದತ್ತಿಯ ಶ್ರೀಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ, ವಿಜಯಪುರದ ನಾಗರಬೆಟ್ಟದ ಆಕ್ಸ್​ಫರ್ಡ್​ ಆಂಗ್ಲ ಶಾಲೆಯ ಭೀಮನಗೌಡ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

 

ಜಿಲ್ಲಾವಾರು ಫಲಿತಾಂಶ

ಚಿತ್ರದುರ್ಗ -ಶೇ.96.8

ಮಂಡ್ಯ-ಶೇ.96.74

ಹಾಸನ-ಶೇ.96.68

ಬೆಂಗಳೂರು ಗ್ರಾಮಾಂತರ-ಶೇ.96.48

ಚಿಕ್ಕಬಳ್ಳಾಪುರ-ಶೇ.96.15

ಕೋಲಾರ-ಶೇ.94.6

ಚಾಮರಾಜನಗರ -ಶೇ.,94.32

ಮಧುಗಿರಿ- ಶೇ.93.23

ಕೊಡಗು-ಶೇ.93.19

ವಿಜಯನಗರ- ಶೇ.91.41

ವಿಜಯಪುರ- ಶೇ. 91.23

ಚಿಕ್ಕೋಡಿ-91.07

ಉತ್ತರಕನ್ನಡ- ಶೇ.90.53

ದಾವಣಗೆರೆ- ಶೇ.90.43

ಕೊಪ್ಪಳ- ಶೇ.90.27

ಮೈಸೂರು ಜಿಲ್ಲೆ- ಶೇ.89.75

ಚಿಕ್ಕಮಗಳೂರು-ಶೇ.89.69

ಉಡುಪಿ- ಶೇ. 89.49

ದಕ್ಷಿಣ ಕನ್ನಡ- ಶೇ. 89.47

ತುಮಕೂರು- ಶೇ. 89.43

ರಾಮನಗರ- ಶೇ. 89.42

ಹಾವೇರಿ ಶೇ.89.11

ಶಿರಸಿ- ಶೇ.87.39

ಧಾರವಾಡ-ಶೇ.86.55

ಗದಗ-ಶೇ.86.51

ಬೆಳಗಾವಿ-ಶೇ.85.85

ಬಾಗಲಕೋಟೆ-ಶೇ.85.14

ಕಲಬುರಗಿ- ಶೇ.84.51

ಶಿವಮೊಗ್ಗ-ಶೇ.84.04

ರಾಯಚೂರು- ಶೇ. 84.02

ಬಳ್ಳಾರಿ- ಶೇ.81.54

ಬೆಂಗಳೂರು ಉತ್ತರ ಶೇ.80.93

ಬೆಂಗಳೂರು ದಕ್ಷಿಣ ಶೇ.78.95

ಬೆಂಗಳೂರು ಪಶ್ಚಿಮ ಶೇ.80.93

ಬೀದರ್ ಶೇ. 78.73

ಯಾದಗಿರಿಗೆ ಕೊನೆಯ ಸ್ಥಾನ- ಶೇ.75.49

lokesh

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

2 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

2 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

5 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

5 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

5 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

5 hours ago