ಬೆಂಗಳೂರು : ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್ಎಸ್ಎಲ್ಸಿ 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್ಎಸ್ಎಲ್ಸಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ.
ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ.
ಬೆಂಗಳೂರಿನ ನ್ಯೂ ಮೆಕಾಲೆ ಶಾಲೆಯ ಭೂಮಿಕಾ ಪೈ, ಚಿಕ್ಕಬಳ್ಳಾಪುರ ಜಿಲ್ಲೆಯ ಅಗಲಗುರ್ಕಿಯ ಬಿಜಿಎಸ್ ಶಾಲೆಯ ಯಶಸ್ಗೌಡ, ಸವದತ್ತಿಯ ಶ್ರೀಕುಮಾರೇಶ್ವರ ಶಾಲೆಯ ಅನುಪಮಾ ಶ್ರೀಶೈಲ್ ಹಿರೆಹೋಳಿ, ವಿಜಯಪುರದ ನಾಗರಬೆಟ್ಟದ ಆಕ್ಸ್ಫರ್ಡ್ ಆಂಗ್ಲ ಶಾಲೆಯ ಭೀಮನಗೌಡ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಜಿಲ್ಲಾವಾರು ಫಲಿತಾಂಶ
ಚಿತ್ರದುರ್ಗ -ಶೇ.96.8
ಮಂಡ್ಯ-ಶೇ.96.74
ಹಾಸನ-ಶೇ.96.68
ಬೆಂಗಳೂರು ಗ್ರಾಮಾಂತರ-ಶೇ.96.48
ಚಿಕ್ಕಬಳ್ಳಾಪುರ-ಶೇ.96.15
ಕೋಲಾರ-ಶೇ.94.6
ಚಾಮರಾಜನಗರ -ಶೇ.,94.32
ಮಧುಗಿರಿ- ಶೇ.93.23
ಕೊಡಗು-ಶೇ.93.19
ವಿಜಯನಗರ- ಶೇ.91.41
ವಿಜಯಪುರ- ಶೇ. 91.23
ಚಿಕ್ಕೋಡಿ-91.07
ಉತ್ತರಕನ್ನಡ- ಶೇ.90.53
ದಾವಣಗೆರೆ- ಶೇ.90.43
ಕೊಪ್ಪಳ- ಶೇ.90.27
ಮೈಸೂರು ಜಿಲ್ಲೆ- ಶೇ.89.75
ಚಿಕ್ಕಮಗಳೂರು-ಶೇ.89.69
ಉಡುಪಿ- ಶೇ. 89.49
ದಕ್ಷಿಣ ಕನ್ನಡ- ಶೇ. 89.47
ತುಮಕೂರು- ಶೇ. 89.43
ರಾಮನಗರ- ಶೇ. 89.42
ಹಾವೇರಿ ಶೇ.89.11
ಶಿರಸಿ- ಶೇ.87.39
ಧಾರವಾಡ-ಶೇ.86.55
ಗದಗ-ಶೇ.86.51
ಬೆಳಗಾವಿ-ಶೇ.85.85
ಬಾಗಲಕೋಟೆ-ಶೇ.85.14
ಕಲಬುರಗಿ- ಶೇ.84.51
ಶಿವಮೊಗ್ಗ-ಶೇ.84.04
ರಾಯಚೂರು- ಶೇ. 84.02
ಬಳ್ಳಾರಿ- ಶೇ.81.54
ಬೆಂಗಳೂರು ಉತ್ತರ ಶೇ.80.93
ಬೆಂಗಳೂರು ದಕ್ಷಿಣ ಶೇ.78.95
ಬೆಂಗಳೂರು ಪಶ್ಚಿಮ ಶೇ.80.93
ಬೀದರ್ ಶೇ. 78.73
ಯಾದಗಿರಿಗೆ ಕೊನೆಯ ಸ್ಥಾನ- ಶೇ.75.49
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…