ಬೆಂಗಳೂರು: ಇಂದು (ಮೇ.9) ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ಕೂಡಾ ರಾಜ್ಯದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಮೊದಲನೇ ಸ್ಥಾನ ಪಡೆದರೆ ಮೈಸೂರಿಗೆ ಏಳನೇ ಸ್ಥಾನ ಲಭಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರಾದ ಮಂಜುಶ್ರೀ ಅವರು ಮಾಹಿತಿ ನೀಡಿದ್ದಾರೆ.
ಈ ಬಾರಿ ರಾಜ್ಯಾದ್ಯಂತ ಶೇಕಡವಾರು 73.4 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ಬಾರಿ ಒಟ್ಟು 8,59, 967 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 6,31,204 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಬಾಲಕರು 287416 ತೇರ್ಗಡೆ ಹೊಂದಿದ್ದು, 3,43,788 ಬಾಲಕೀಯರು ಪಾಸಾಗಿದ್ದು, ಬಾಲಕರಿಗಿಂತ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಬಾಲಕರ ಶೇಕಡವಾರು 65.90 ರಷ್ಟು ಇದ್ದರೇ, ಶೇ 81.11 ರಷ್ಟು ಬಾಲಕೀಯರು ಪಾಸಾಗಿದ್ದಾರೆ.
ಉಡುಪಿಗೆ ಮೊದಲ ಸ್ಥಾನ. ಮೈಸೂರಿಗೆ ಏಳನೇ ಸ್ಥಾನ!
ಇನ್ನು ಜಿಲ್ಲಾವಾರು ಶೇಕಡ ಫಲಿತಾಂಶದಲ್ಲಿ ಉಡುಪಿಗೆ ಮೊದಲ ಸ್ಥಾನ ಲಭಿಸಿದೆ. ಉಡುಪಿ ಜಿಲ್ಲೆಯ ಶೇ. 94 ರಷ್ಟು ಫಲಿತಾಂಶ ಬಂದರೆ, ಕೊನೆಯ ಸ್ಥಾನದಲ್ಲಿ ಯಾದಗಿರಿ ಜಿಲ್ಲೆ ಶೇ. 50.59 ಫಲಿತಾಂಶ ಹೊಂದಿದ್ದು, ಕೊನೆಯ ಸ್ಥಾನದಲ್ಲಿದೆ. ಕ್ರಮವಾಗಿ ಎರಡನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಶೇ. 92.12, ಮೂರನೇ ಸ್ಥಾನದಲ್ಲಿ ಶಿವಮೊಗ್ಗ ಶೇ 88.67 ನಾಲ್ಕನೇ ಸ್ಥಾನದಲ್ಲಿ ಕೊಡಗು ಶೇ 88.67 ರಷ್ಟು ತೇರ್ಗಡೆ ಫಲಿತಾಂಶ ಹೊಂದಿವೆ.
ಇನ್ನು ಬಾಗಲಕೋಟೆಯ ಅಂಕಿತಾ ಬಸಪ್ಪ ಎಂಬುವವರು 625/625 ರಷ್ಟು ಅಂಕಗಳಿಸಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…