ಬೆಂಗಳೂರು: ಇಂದು (ಮೇ.9) ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ಕೂಡಾ ರಾಜ್ಯದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಮೊದಲನೇ ಸ್ಥಾನ ಪಡೆದರೆ ಮೈಸೂರಿಗೆ ಏಳನೇ ಸ್ಥಾನ ಲಭಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರಾದ ಮಂಜುಶ್ರೀ ಅವರು ಮಾಹಿತಿ ನೀಡಿದ್ದಾರೆ.
ಈ ಬಾರಿ ರಾಜ್ಯಾದ್ಯಂತ ಶೇಕಡವಾರು 73.4 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ಬಾರಿ ಒಟ್ಟು 8,59, 967 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 6,31,204 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಬಾಲಕರು 287416 ತೇರ್ಗಡೆ ಹೊಂದಿದ್ದು, 3,43,788 ಬಾಲಕೀಯರು ಪಾಸಾಗಿದ್ದು, ಬಾಲಕರಿಗಿಂತ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಬಾಲಕರ ಶೇಕಡವಾರು 65.90 ರಷ್ಟು ಇದ್ದರೇ, ಶೇ 81.11 ರಷ್ಟು ಬಾಲಕೀಯರು ಪಾಸಾಗಿದ್ದಾರೆ.
ಉಡುಪಿಗೆ ಮೊದಲ ಸ್ಥಾನ. ಮೈಸೂರಿಗೆ ಏಳನೇ ಸ್ಥಾನ!
ಇನ್ನು ಜಿಲ್ಲಾವಾರು ಶೇಕಡ ಫಲಿತಾಂಶದಲ್ಲಿ ಉಡುಪಿಗೆ ಮೊದಲ ಸ್ಥಾನ ಲಭಿಸಿದೆ. ಉಡುಪಿ ಜಿಲ್ಲೆಯ ಶೇ. 94 ರಷ್ಟು ಫಲಿತಾಂಶ ಬಂದರೆ, ಕೊನೆಯ ಸ್ಥಾನದಲ್ಲಿ ಯಾದಗಿರಿ ಜಿಲ್ಲೆ ಶೇ. 50.59 ಫಲಿತಾಂಶ ಹೊಂದಿದ್ದು, ಕೊನೆಯ ಸ್ಥಾನದಲ್ಲಿದೆ. ಕ್ರಮವಾಗಿ ಎರಡನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಶೇ. 92.12, ಮೂರನೇ ಸ್ಥಾನದಲ್ಲಿ ಶಿವಮೊಗ್ಗ ಶೇ 88.67 ನಾಲ್ಕನೇ ಸ್ಥಾನದಲ್ಲಿ ಕೊಡಗು ಶೇ 88.67 ರಷ್ಟು ತೇರ್ಗಡೆ ಫಲಿತಾಂಶ ಹೊಂದಿವೆ.
ಇನ್ನು ಬಾಗಲಕೋಟೆಯ ಅಂಕಿತಾ ಬಸಪ್ಪ ಎಂಬುವವರು 625/625 ರಷ್ಟು ಅಂಕಗಳಿಸಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2026-27ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಇದು ಅವರ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್ಅನ್ನು ಮಂಡಿಸಲಿದ್ದಾರೆ. ಸಾಂಪ್ರದಾಯಿಕ…
ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 9ನೇ ಬಜೆಟ್ ಮಂಡನೆ…
ಸೂರ್ಯ ಪುತ್ರ ಆತನ ಹೆಸರು ದೀಪಕ್. ಮಲ್ಟಿ ನ್ಯಾಷನಲ್ ಕಂಪೆನಿ ಉದ್ಯೋಗಿ. ಕೇರಳದ ಕಣ್ಣೂರಿನ ರೈಲ್ವೇ ಸ್ಟೇಷನ್ ಪಕ್ಕದಿಂದ ಜನ…
ಸಿರಿ ಮೈಸೂರು ಬೆಳ್ಳಿಮೋಡ, ಗೆಜ್ಜೆಪೂಜೆ, ಎಡಕಲ್ಲು ಗುಡ್ಡದ ಮೇಲೆ, ಬಿಳಿ ಹೆಂಡ್ತಿ, ನಾಗರ ಹಾವು, ರಂಗನಾಯಕಿ, ಮಸಣದ ಹೂವು, ಶರಪಂಜರ...…
ಅಕ್ಷತಾ ನೀವು ಬೆಕ್ಕುಪ್ರಿಯರಾಗಿದ್ದರೆ ಮೈಸೂರು-ನಂಜನಗೂಡು ರಸ್ತೆಯ ಈ ಮಾರ್ಜಾಲ ಸಂಗ್ರಹಾಲಯಕ್ಕೆ ಭೇಟಿಕೊಡಿ. ಮುದ್ದಿನ ಸಾಕುಪ್ರಾಣಿಯಾಗಿ ಮನೆಯೊಳಗಿರುವ ಬೆಕ್ಕನ್ನು ಕೌತುಕದ ಕಣ್ಣಿನಿಂದ…