BREAKING NEWS

SSLC Resutls 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಮೈಸೂರಿಗೆ ಏಳನೇ ಸ್ಥಾನ!

ಬೆಂಗಳೂರು: ಇಂದು (ಮೇ.9) ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ ಕೂಡಾ ರಾಜ್ಯದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಮೊದಲನೇ ಸ್ಥಾನ ಪಡೆದರೆ ಮೈಸೂರಿಗೆ ಏಳನೇ ಸ್ಥಾನ ಲಭಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರಾದ ಮಂಜುಶ್ರೀ ಅವರು ಮಾಹಿತಿ ನೀಡಿದ್ದಾರೆ.

ಈ ಬಾರಿ ರಾಜ್ಯಾದ್ಯಂತ ಶೇಕಡವಾರು 73.4 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಈ ಬಾರಿ ಒಟ್ಟು 8,59, 967 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 6,31,204 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಬಾಲಕರು 287416 ತೇರ್ಗಡೆ ಹೊಂದಿದ್ದು, 3,43,788 ಬಾಲಕೀಯರು ಪಾಸಾಗಿದ್ದು, ಬಾಲಕರಿಗಿಂತ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಬಾಲಕರ ಶೇಕಡವಾರು 65.90 ರಷ್ಟು ಇದ್ದರೇ, ಶೇ 81.11 ರಷ್ಟು ಬಾಲಕೀಯರು ಪಾಸಾಗಿದ್ದಾರೆ.

ಉಡುಪಿಗೆ ಮೊದಲ ಸ್ಥಾನ. ಮೈಸೂರಿಗೆ ಏಳನೇ ಸ್ಥಾನ!

ಇನ್ನು ಜಿಲ್ಲಾವಾರು ಶೇಕಡ ಫಲಿತಾಂಶದಲ್ಲಿ ಉಡುಪಿಗೆ ಮೊದಲ ಸ್ಥಾನ ಲಭಿಸಿದೆ. ಉಡುಪಿ ಜಿಲ್ಲೆಯ ಶೇ. 94 ರಷ್ಟು ಫಲಿತಾಂಶ ಬಂದರೆ, ಕೊನೆಯ ಸ್ಥಾನದಲ್ಲಿ ಯಾದಗಿರಿ ಜಿಲ್ಲೆ ಶೇ. 50.59 ಫಲಿತಾಂಶ ಹೊಂದಿದ್ದು, ಕೊನೆಯ ಸ್ಥಾನದಲ್ಲಿದೆ. ಕ್ರಮವಾಗಿ ಎರಡನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಶೇ. 92.12, ಮೂರನೇ ಸ್ಥಾನದಲ್ಲಿ ಶಿವಮೊಗ್ಗ ಶೇ 88.67 ನಾಲ್ಕನೇ ಸ್ಥಾನದಲ್ಲಿ ಕೊಡಗು ಶೇ 88.67 ರಷ್ಟು ತೇರ್ಗಡೆ ಫಲಿತಾಂಶ ಹೊಂದಿವೆ.

ಇನ್ನು ಬಾಗಲಕೋಟೆಯ ಅಂಕಿತಾ ಬಸಪ್ಪ ಎಂಬುವವರು 625/625 ರಷ್ಟು ಅಂಕಗಳಿಸಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

21 mins ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

27 mins ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

31 mins ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

11 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

12 hours ago